ಮೈಸೂರು: ರಾಜ್ಯಾದ್ಯಂತ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.
ಈ ಬೆನ್ನಲ್ಲೇ ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಅವರು, ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ ಎಂದು ಟೀಕೆ ಮಾಡಿದ್ದಾರೆ.
ಮುಡಾ ಹಗರಣದ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ಆಗುತ್ತದೆ. ಸದ್ಯಕ್ಕೆ ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲಾಗುತ್ತಿದೆ. ಶುಕ್ರವಾರ ಅಥವಾ ಮುಂದಿನ ಸೋಮವಾರ ಮುಡಾ ಹಗರಣದ ಬಗ್ಗೆ ಮಾತನಾಡುತ್ತೇವೆ. ಮುಡಾ ಹಗರಣಕ್ಕೆ ತಾರ್ಕಿಕ ಅಂತ್ಯ ಸಿಗಲಿದೆ ಎಂದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಮುಡಾ ಪ್ರಕರಣದ ಬಗ್ಗೆ ಎಲ್ಲಾ ಬೆಳವಣಿಗೆಗಳನ್ನು ನೋಡಿದ್ರೆ ಪ್ರಕರಣವನ್ನು ಮುಂದೂಡುವ ತಂತ್ರ ಅಡಗಿದೆ. ಈ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಆ ಎಲ್ಲಾ ದಾಖಲೆಗಳನ್ನು ಬಹಿರಂಗ ಪಡಿಸುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದರು.
ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು…
ಇಂದು ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಪುರುಷರಿಗೆ ಸರಿಸಮನಾಗಿ ದುಡಿಯುತ್ತಿದ್ದು, ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಮಹಿಳೆಯರು ಒಂದು…
ಕರ್ನಾಟಕದ ಸಂಸ್ಕೃತಿ ಮತ್ತು ಐತಿಹಾಸಿಕ ಪರಂಪರೆಯ ಭಾಗವಾಗಿರುವ ಅನೇಕ ಅಮೂಲ್ಯವಾದ ಶಿಲ್ಪಗಳು ಬ್ರಿಟಿಷ್ ಮ್ಯೂಜಿಯಂ (ಲಂಡನ್), ಲೂವ್ರೇ ಮ್ಯೂಜಿಯಂ (ಪ್ಯಾರಿಸ್),…
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಪುಟ್ಟ ಗ್ರಾಮ ಬದನವಾಳುಗೆ ೧೯೨೭ಹಾಗೂ ೧೯೩೪ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭೇಟಿ ನೀಡಿ ಕೈಮಗ್ಗ…
ಪ್ರೊ.ಆರ್.ಎಂ.ಚಿಂತಾಮಣಿ ೨೦೨೫-೨೬ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದ ಕೊನೆಯ ವೇಳೆಗೆ (ಡಿಸೆಂಬರ್೨೦೨೫) ದೇಶದಲ್ಲಿ ಉಪಭೋಗ (Consumption) ಮುಂದಾಗಿರುವ ಆರ್ಥಿಕ ಚಟುವಟಿಕೆಗಳು…
ಕೆ.ಬಿ.ರಮೇಶನಾಯಕ ದೇಶದಲ್ಲೇ ಹಲವು ಏಳು-ಬೀಳುಗಳು, ಸ್ಥಿತ್ಯಂತರವನ್ನು ಕಂಡ ನಾಡಿನ ಸಾಂಸ್ಕೃತಿಕ ರಾಜಧಾನಿ ಮೈಸೂರು ಜಿಲ್ಲೆಯು ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ. ಮುಖ್ಯಮಂತ್ರಿಯಾಗಿ…