ಮೈಸೂರು: ಕೇರಳದ ವಯನಾಡಿನಲ್ಲಿ ಭಾರಿ ಮಳೆ ಹಿನ್ನೆಲೆ ಎಚ್.ಡಿ ಕೋಟೆಯ ಕಬಿನಿ ಡ್ಯಾಂಗೆ ಒಳಹರಿವಿನ ನೀರಿನ ಪ್ರಮಾಣ ಹೆಚ್ಚಿದೆ. ಈ ಹಿನ್ನೆಲೆ ಕಬಿನಿ ಡ್ಯಾಂ ಹಿತದೃಷ್ಠಿಯಿಂದ ಭಾರೀ ಪ್ರಮಾಣದ ನೀರನ್ನು ನದಿಗಳಿಗೆ ಬಿಡಲಾಗಿದೆ.
ಈ ಹಿನ್ನೆಲೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಪ್ರವಾಹನ ಭೀತಿ ಎದುರಾಗಿದೆ. ಮೈಸೂರು-ನಂಜನಗೂಡು ಹೆದ್ದಾರಿಯಲ್ಲಿ ಸಂಚಾರ ಬಂದ್ ಮಾಡಲಾಗಿದೆ.
ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಲಿಂಗಭಟ್ಟರ ಗುಡಿ, ಕಾಶಿ ವಿಶ್ವನಾಥಸ್ವಾಮಿ ದೇವಾಲಯ, ಶ್ರೀಬಸವೇಶ್ವರ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪಸ್ವಾಮಿ, ಪರಶುರಾಮ ದೇವಾಲಯ ಹಾಗೂ ದತ್ತಾತ್ರೇಯಸ್ವಾಮಿ ದೇವಾಲಗಳು ಸಂಪೂರ್ಣ ಜಲಾವೃತಗೊಂಡಿವೆ.
ದೇವಾಲಯದ ಸುತ್ತಮುತ್ತ ಪ್ರದೇಶಗಳು ಹಾಗೂ ಹಳ್ಳದ ಕೇರಿಯಲ್ಲಿನ ಕೆಲವು ಮನೆಗಳು ಜಲಾವೃತಗೊಂಡಿದೆ. ಈ ಹಿನ್ನೆಲೆ ಮೈಸೂರು-ನಂಜನಗೂಡು ಹೆದ್ದಾರಿಯನ್ನು ಬಂದ್ ಮಾಡಲಾಗಿದೆ.
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…