ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ ಹೊಸ ವರ್ಷವನ್ನು ವಿಶೇಷವಾಗಿ ಸ್ವಾಗತಿಸಿದ್ದಾರೆ.
ಮೈಸೂರು ನಗರದಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ನಿರಂತರವಾಗಿ ಕಳೆದ 30 ದಿನಗಳಿಂದ ರಸ್ತೆ ಬದಿಯಲ್ಲಿ ಮಲಗಿರುವ ನಿರಾಶ್ರಿತರು ಹಾಗೂ ಅಸಹಾಯಕರಿಗೆ ಹೊದಿಕೆ ವಿತರಣೆ ನೀಡುತ್ತಾ ಬಂದಿದ್ದು, ವರ್ಷದ ಕಡೆಯ ದಿವಸ ಮೋಜು ಮಸ್ತಿ ಮಾಡದೇ ಬಂಡಿಪಾಳ್ಯ ತರಕಾರಿ ಮಾರ್ಕೆಟ್ ಸುತ್ತಮುತ್ತ ಮಲಗಿರುವ ನಿರಾಶ್ರಿತರಿಗೆ ಹೊದಿಕೆಯನ್ನು ನೀಡಿ ವಿಶೇಷವಾಗಿ ವರ್ಷದ ಕೊನೆಯ ದಿವಸವನ್ನು ಆಚರಿಸಿದ್ದಾರೆ.
ಕೆಎಂಪಿಕೆ ಟ್ರಸ್ಟ್ ಗೆ ಯುವಕರು ಕೈಜೋಡಿಸಿ ಲಾರಿ ಕೆಳಗಡೆ ಜೀವನ ಸಾಗಿಸುತ್ತಿರುವ ನಿರಾಶ್ರಿತರ ಬಳಿಗೆ ತೆರಳಿ ಹೊದಿಕೆ ನೀಡಿ ಮಾನವೀಯತೆ ಮೆರೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಯುವಕರು ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಮುಳುಗಿ ಮೋಜು ಮಸ್ತಿ ಮಾಡಲು ಸ್ನೇಹಿತರೊಡನೆ ಪ್ರವಾಸಿ ಸ್ಥಳಕ್ಕೆ ತೆರಳಿ ಪಟಾಕಿ ಸಿಡಿಸಿ ಕೇಕ್ ಕಟ್ ಮಾಡಿ ಹಾಗೂ ಮೈಮರೆತು ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸುವ ಇಂತಹ ಸಂದರ್ಭದಲ್ಲೂ 50ಕ್ಕೂ ಹೆಚ್ಚು ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಹೊಸ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಿ ಸಮಾಜಕ್ಕೆ ಸಂದೇಶ ನೀಡಿದ್ದಾರೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…