ಮೈಸೂರು ನಗರ

ಮೈಸೂರು: ನಿರಾಶ್ರಿತರಿಗೆ ಹೊದಿಕೆ ನೀಡುವ ಮೂಲಕ ಹೊಸ ವರ್ಷಾಚರಣೆ

ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ ಹೊಸ ವರ್ಷವನ್ನು ವಿಶೇಷವಾಗಿ ಸ್ವಾಗತಿಸಿದ್ದಾರೆ.

ಮೈಸೂರು ನಗರದಲ್ಲಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ನಿರಂತರವಾಗಿ ಕಳೆದ 30 ದಿನಗಳಿಂದ ರಸ್ತೆ ಬದಿಯಲ್ಲಿ ಮಲಗಿರುವ ನಿರಾಶ್ರಿತರು ಹಾಗೂ ಅಸಹಾಯಕರಿಗೆ ಹೊದಿಕೆ ವಿತರಣೆ ನೀಡುತ್ತಾ ಬಂದಿದ್ದು, ವರ್ಷದ ಕಡೆಯ ದಿವಸ ಮೋಜು ಮಸ್ತಿ ಮಾಡದೇ ಬಂಡಿಪಾಳ್ಯ ತರಕಾರಿ ಮಾರ್ಕೆಟ್ ಸುತ್ತಮುತ್ತ ಮಲಗಿರುವ ನಿರಾಶ್ರಿತರಿಗೆ ಹೊದಿಕೆಯನ್ನು ನೀಡಿ ವಿಶೇಷವಾಗಿ ವರ್ಷದ ಕೊನೆಯ ದಿವಸವನ್ನು ಆಚರಿಸಿದ್ದಾರೆ.

ಕೆಎಂಪಿಕೆ ಟ್ರಸ್ಟ್ ಗೆ ಯುವಕರು ಕೈಜೋಡಿಸಿ ಲಾರಿ ಕೆಳಗಡೆ ಜೀವನ ಸಾಗಿಸುತ್ತಿರುವ ನಿರಾಶ್ರಿತರ ಬಳಿಗೆ ತೆರಳಿ ಹೊದಿಕೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಯುವಕರು ಪಾಶ್ಚಾತ್ಯ ಸಂಸ್ಕೃತಿಯಲ್ಲಿ ಮುಳುಗಿ ಮೋಜು ಮಸ್ತಿ ಮಾಡಲು ಸ್ನೇಹಿತರೊಡನೆ ಪ್ರವಾಸಿ ಸ್ಥಳಕ್ಕೆ ತೆರಳಿ ಪಟಾಕಿ ಸಿಡಿಸಿ ಕೇಕ್ ಕಟ್ ಮಾಡಿ ಹಾಗೂ ಮೈಮರೆತು ಮದ್ಯಪಾನ ಮಾಡಿ ಕುಣಿದು ಕುಪ್ಪಳಿಸುವ ಇಂತಹ ಸಂದರ್ಭದಲ್ಲೂ 50ಕ್ಕೂ ಹೆಚ್ಚು ನಿರಾಶ್ರಿತರಿಗೆ ಹೊದಿಕೆ ವಿತರಿಸುವ ಮೂಲಕ ಹೊಸ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಿ ಸಮಾಜಕ್ಕೆ ಸಂದೇಶ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

2 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

2 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

5 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

5 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

5 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

5 hours ago