ಮೈಸೂರು : ಗಂಡನ ಮನೆಯಿಂದ ನವ ವಿವಾಹಿತೆ ರಾತ್ರೋ ರಾತ್ರಿ ನಾಪತ್ತೆಯಾಗಿರುವುದಾಗಿ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಲವತ್ತ ಆರ್.ಎಸ್. ನಾಯ್ಡು ನಗರ ನಿವಾಸಿ ಸುಹಾಸ್ ಅವರ ಪತ್ನಿ ಸರಸ್ವತಿ(21) ನಾಪತ್ತೆಯಾದವರು. ಪಾಂಡವಪುರ ತಾಲ್ಲೂಕಿನ ಶಿವಯ್ಯ ಎಂಬುವರ ಪುತ್ರಿ ಸರಸ್ವತಿಯನ್ನು ಕಳೆದ ಮಾ.1ರಂದು ವಿವಾಹವಾಗಿದ್ದು, ದಂಪತಿ ಅನ್ಯೋನ್ಯವಾಗಿದ್ದೆವು. ಎಂದಿನಂತೆ ಮೇ 5ರಂದು ರಾತ್ರಿ ಊಟ ಮಾಡಿ ಮಲಗಿದ್ದು, ಮಧ್ಯರಾತ್ರಿ 12 ಗಂಟೆಗೆ ಎಚ್ಚರಗೊಂಡಾಗ ಪತ್ನಿ ಇರಲಿಲ್ಲ. ಶೌಚಾಲಯಕ್ಕೆ ಹೋಗಿರಬಹುದು ಎಂದು ತಿಳಿದು ಮಲಗಿದೆ. ಮುಂಜಾನೆ 5.30ಕ್ಕೆ ಎಚ್ಚರವಾಗಿ ನೋಡಿದಾಗಲೂ ಆಕೆ ಕಾಣಿಸಲಿಲ್ಲ. ಆಕೆಯ ತವರು ಮನೆಗೆ ಕರೆ ಮಾಡಿ ವಿಚಾರಿಸಿದ್ದು, ಆಕೆ ಅಲ್ಲಿಗೂ ಹೋಗಿಲ್ಲ ಎಂದು ಸುಹಾಸ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…