ಮೈಸೂರು: ಮೈಸೂರು ಅರಮನೆಯ ಪ್ರಸಿದ್ಧ ಚಿನ್ನದ ಅಂಬಾರಿ ವೀಕ್ಷಣೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಈ ಮೂಲಕ ಮೈಸೂರಿಗೆ ಬರುವ ಪ್ರವಾಸಿಗರಿಗೆ ನಿರಾಸೆ ಉಂಟಾಗಿದೆ ಎನ್ನಲಾಗುತ್ತಿದೆ.
ಅಂಬಾರಿಯ ಕೆಳಭಾಗ ಹಾಗೂ ಹಿಂಭಾಗ ಮರದ ಕೆಲಸ ಹಾಗೂ ರಿಪೇರಿ ಕಾರ್ಯಗಳು ನಡೆಯುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅರಮನೆ ಆಡಳಿತ ಮಂಡಳಿ ತಿಳಿಸಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಇದು ಭಾರೀ ನಿರಾಸೆಯನ್ನುಂಟು ಮಾಡಿದ್ದು, ಅಂಬಾರಿಯ ಸಂರಕ್ಷಣೆಗಾಗಿ ಈ ಕ್ರಮ ಕೈಗೊಂಡಿರುವುದು ಅವಶ್ಯಕವಾಗಿದೆ.
ಮೈಸೂರು ಅರಮನೆ ಹಾಗೂ ಅಂಬಾರಿಯನ್ನು ವೀಕ್ಷಿಸಲು ಸಾವಿರಾರು ಜನರು ಸಾಂಸ್ಕೃತಿಕ ನಗರಿ ಮೈಸೂರಿಗೆ ಬರುತ್ತಾರೆ. ಅಂಬಾರಿಯನ್ನು ನೋಡಿ ಖುಷಿಪಡುತ್ತಾರೆ. ಆದರೆ ಕೆಲ ದಿನಗಳ ಕಾಲ ಅಂಬಾರಿ ವೀಕ್ಷಣೆಗೆ ಅವಕಾಶವಿರುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಪ್ರವಾಸಿಗರಿಗೆ ಭಾರೀ ನಿರಾಸೆಯಾಗಿದೆ ಎನ್ನಲಾಗುತ್ತಿದೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…