ಮೈಸೂರು ನಗರ

ಇನ್ನು ಮುಂದೆ ವಾಟ್ಸಪ್‌ನಲ್ಲೂ ಲಭ್ಯವಾಗಲಿದೆ ಮೈಸೂರು ಅರಮನೆ ಪ್ರವೇಶ ಟಿಕೆಟ್‌

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ಪ್ರವೇಶ ಟಿಕೆಟ್‌ಗಳನ್ನು ವಾಟ್ಸಪ್‌ನಲ್ಲೂ ಪಡೆಯುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಸರ್ಕಾರದ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಮೊಬೈಲ್‌ ಫೋನ್‌ ಮೂಲಕ ಟಿಕೆಟ್‌ ಖರೀದಿಸಬಹುದಾಗಿದೆ.

ವಾಟ್ಸಪ್‌ ಟಿಕೆಟಿಂಗ್‌ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು, ಇದರಿಂದ ಪ್ರವಾಸಿಗರಿಗೆ ಅರಮನೆ ಪ್ರವೇಶ ಮತ್ತಷ್ಟು ಸುಲಭವಾಗಲಿದ್ದು, ಅತಿ ಸುಲಭವಾಗಿ ಟಿಕೆಟ್‌ ಪಡೆಯಬಹುದಾಗಿದೆ.

ಇದರ ಜೊತೆಗೆ ಪ್ರವಾಸಿಗರ ಸಮಯವೂ ಕೂಡ ಉಳಿತಾಯವಾಗಲಿದ್ದು, ಈ ಬಗ್ಗೆ ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ.

ಈ ಉಪಕ್ರಮ ಇಂದಿನಿಂದಲೇ ಜಾರಿಗೆ ಬಂದಿದ್ದು, ವಾಟ್ಸಪ್‌ ಸಂಖ್ಯೆ:8884160088ಗೆ Hi ಎಂದು ಟೈಪ್‌ ಮಾಡುವ ಮೂಲಕ ಟಿಕೆಟ್‌ ಖರೀದಿಸಬಹುದಾಗಿದೆ. ಆ ಟಿಕೆಟ್‌ಗಳ ವ್ಯಾಲಿಡಿಟಿ ಖರೀದಿಸಿದ ದಿನದಿಂದ ಐದು ದಿನಗಳವರೆಗೆ ಇರುತ್ತದೆ.

ಇನ್ನು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಅರಮನೆಯನ್ನು ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬೆಂಗಳೂರು | 4 ವರ್ಷದ ಬಾಲಕಿ ಬರ್ಬರ ಹತ್ಯೆ ; ಅತ್ಯಾಚಾರ ಶಂಕೆ

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ.…

5 mins ago

ಇರಾನ್‌ ಮೇಲೆ ರಣಭೀಕರ ದಾಳಿಗೆ ಅಮೆರಿಕ ಪ್ಲ್ಯಾನ್‌

ವಾಷಿಂಗ್ಟನ್‌ : ಅಮೆರಿಕ ತನ್ನ ಮೇಲೆ ಮಾಡುತ್ತಿರುವ ದಾಳಿಗೆ ಪ್ರತಿಯಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ದೇಶಗಳಲ್ಲಿನ ಅಮೆರಿಕದ ಮಿಲಿಟರಿ…

22 mins ago

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

2 hours ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

2 hours ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

3 hours ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

4 hours ago