ಮೈಸೂರು: ಮಳೆಗಾಲ ಸಮೀಪಿಸುತ್ತಿದ್ದಂತೆ ಮೈಸೂರು ಅರಮನೆ ಆಡಳಿತ ಮಂಡಳಿ ಎಚ್ಚೆತ್ತುಕೊಂಡಿದ್ದು, ಅರಮನೆ ಸುತ್ತ ಇರುವ ಕೋಟೆಯ ದುರಸ್ತಿಯನ್ನು ಕಾರ್ಯ ಕೈಗೊಂಡಿದೆ.
ಸುಮಾರು 72 ಎಕರೆ ವಿಸ್ತೀರ್ಣದ ಮೈಸೂರು ಅರಮನೆ ಸುತ್ತ ನಿರ್ಮಾಣವಾಗಿರುವ ಕೋಟೆ ಇದಾಗಿದ್ದು, ನೂರಾರು ವರ್ಷಗಳ ಪಾರಂಪರಿಕ ಕೋಟೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕಳೆದ ಎರಡು ವರ್ಷಗಳ ಹಿಂದೆ ಅರಮನೆ ಕೋಟೆಯ ಪೂರ್ವಭಾಗದಲ್ಲಿ ಕುಸಿದಿತ್ತು. ಈ ಹಿನ್ನೆಲೆಯಲ್ಲಿ ಪಾರಂಪರಿಕತಗೆ ಧಕ್ಕೆಯಾಗದಂತೆ ಹಳೆಯ ಕಲ್ಲುಗಳನ್ನೇ ಬಳಸಿ ಕೋಟೆ ದುರಸ್ತಿ ಕಾರ್ಯ ಕೈಗೊಂಡಿದ್ದು, ಭಾರೀ ಗಾತ್ರದ ಕಲ್ಲು ಎತ್ತಲು ಕ್ರೇನ್ ಬಳಕೆ ಮಾಡಿಕೊಳ್ಳಲಾಗಿದೆ.
ಅರಮನೆಯ ಮುಖ್ಯ ದ್ವಾರದ ಜಯಮಾರ್ತಾಂಡ ಗೇಟ್ನ ಬಲಭಾಗದಲ್ಲಿ ಸುಮಾರು ಎರಡು ವಾರಗಳಿಂದಲೂ ದುರಸ್ತಿ ಕಾರ್ಯ ನಡೆಯುತ್ತಿದ್ದು, ಹಳೆಯ ಕಲ್ಲುಗಳು, ಸಿಮೆಂಟ್, ಮರಳು ಬಳಸಿ ಐತಿಹಾಸಿಕ ಕೋಟೆ ಮಾದರಿಯಲ್ಲೇ ನಿರ್ಮಾಣ ಕಾರ್ಯ ಮಾಡಲಾಗುತ್ತಿದೆ.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…