ಮೈಸೂರು ನಗರ

ಮೈಸೂರು | ಪೇದೆಯಿಂದ 35 ಲಕ್ಷ ರೂ. ವಂಚನೆ : ದೂರು

ಮೈಸೂರು : ಪೊಲೀಸ್ ಪೇದೆ ಒಬ್ಬರು ಪೇಪರ್ ಗ್ಲಾಸ್ ಹಾಗೂ ಜ್ಯೂಸ್ ತಯಾರಿಕಾ ಘಟಕ ಆರಂಭಿಸುವುದಾಗಿ ಹೇಳಿ ಸ್ನೇಹಿತರಿಂದ 35 ಲಕ್ಷ ರೂ. ಹಣ ಪಡೆದು ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಪೇದೆ ರಾಜು ಎಂಬಾತನ ವಿರುದ್ಧ ಕುವೆಂಪುನಗರ ನಿವಾಸಿ ಮಂಜುಳಾ ಜೈನ್, ಸಿದ್ದೇಶ್ ಹಾಗೂ ಮಹಾಲಕ್ಷಿ ಎಂಬವರು ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನು ಓದಿ: ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ : ವಿದ್ಯಾರ್ಥಿಗಳಿಗೆ ಸಿಎಂ ಕರೆ

ಪೇದೆ ರಾಜು ಅವರು ತಮಗೆ ಪರಿಚಯವಿದ್ದ ಮಂಜುಳಾ ಜೈನ್ ಅವರನ್ನು ಭೇಟಿ ಮಾಡಿ ಪೇಪರ್ ಗ್ಲಾಸ್ ಹಾಗೂ ಜ್ಯೂಸ್ ತಯಾರಿಕಾ ಘಟಕ ಆರಂಭಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಸಂಬಂಧ ಮಂಜುಳಾ ಅವರು ತಮಗೆ ಪರಿಚಯವಿದ್ದ ಸಿದ್ದೇಶ್ ದಂಪತಿಯನ್ನು ರಾಜುಗೆ ಪರಿಚಯಿಸಿದ್ದಾರೆ.

ನಿಮ್ಮನ್ನೂ ಪಾಲುದಾರರನ್ನಾಗಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿ ದಂಪತಿಯಿಂದ 35 ಲಕ್ಷ ರೂ. ಹಣ ಪಡೆದಿದ್ದಾರೆ. ನಂತರ ಇವರಿಗೆ ಹಣವನ್ನು ಹಿಂದಿರುಗಿಸಿರಲಿಲ್ಲ. ನಾವು ಕೊಟ್ಟಿರುವ ಹಣವನ್ನು ವಾಪಸ್ ನೀಡಿ ಎಂದು ಕೇಳಲು ಹೋದ ಸಂದರ್ಭದಲ್ಲಿ ಹಣ ಕೊಡಲು ನಿರಾಕರಿಸಿದ್ದಲ್ಲದೇ ನಮ್ಮ ಮೇಲೆ ಪೇದೆ ರಾಜು ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

4 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago