ಮೈಸೂರು : ಅಕ್ಟೋಬರ್ 9 ರಂದು ನಡೆದ ಬಾಲಕಿ ಮೇಲಿನ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿ ಬಂಧನ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ರೇಣುಕಾರಾಜು ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಸಂಬಂಧ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ರೇಣುಕಾರಾಜು ಅವರಿಗೆ ಪ್ರಕರಣದ ತನಿಖಾಧಿಕಾರಿ ಹಾಗೂ ಮೈಸೂರು ನಗರ ದೇವರಾಜ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ನೋಟಿಸ್ನಲ್ಲಿ ಇರುವುದೇನು?
ದಿನಾಂಕ-09/10/2025 ರಂದು ನಜರ್ ಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾವು ಅಮೋಘ ಕರ್ನಾಟಕ ಎಂಬ ಸಾಮಾಜಿಕ ಜಾಲತಾಣದಲ್ಲಿ ಸದರಿ ಪ್ರಕರಣದ ನಿಜವಾದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದೀವಿ ಎಂದು ಹೇಳಿರುವ ವಿಚಾರದಲ್ಲಿ ನಮಗೆ ವಿಶ್ವಾಸವಿಲ್ಲ ಈ ಬಗ್ಗೆ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಹೇಳಿಕೆ ನೀಡಿದ್ದು, ಸದರಿ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.
ಇದನ್ನೂ ಓದಿ:-RSS ನೋಂದಣಿ ದಾಖಲೆ ಪತ್ರ ಬಹಿರಂಗ ಪಡಿಸಲು : ಸಚಿವ ಪ್ರಿಯಾಂಕ್ ಖರ್ಗೆ ಸವಾಲು
ಈ ಪ್ರಕರಣವು ಘೋರ, ಅತಿ ಸೂಕ್ಷ್ಮ ಹಾಗೂ ಗಂಭೀರ ಪ್ರಕರಣವಾಗಿದ್ದು, ತನಿಖೆಯು ವೈಜ್ಞಾನಿಕವಾಗಿ ಹಾಗೂ ಪಾರದರ್ಶಕವಾಗಿ ಸರಿ ದಾರಿಯಲ್ಲಿ ಸಾಗುತ್ತಿದ್ದರೂ ನೀವು ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡಿ ಪ್ರಚಾರದ ಗೀಳಿಗಾಗಿ ಆಧಾರ ರಹಿತ ಹೇಳಿಕೆಯನ್ನ ನೀಡುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ನಿಮ್ಮ ಮೇಲೆ ಏಕೆ ಕ್ರಮವನ್ನು ತೆಗೆದುಕೊಳ್ಳಬಾರದು ಎಂಬುದಾಗಿ ಈ ಮೂಲಕ ನಿಮಗೆ ನೋಟಿಸ್ ನೀಡುತ್ತಿದ್ದೇವೆ. ನೋಟಿಸ್ ತಲುಪಿದ ಕೂಡಲೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…
ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…
ಟೋಕಿಯೋ : ಜಪಾನ್ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…