ಮೈಸೂರು ನಗರ

ಮೈಸೂರು | ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆಗೆ ಪೊಲೀಸ್‌ ನೋಟಿಸ್‌

ಮೈಸೂರು : ಅಕ್ಟೋಬರ್ 9 ರಂದು ನಡೆದ ಬಾಲಕಿ ಮೇಲಿನ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿ ಬಂಧನ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ರೇಣುಕಾರಾಜು ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಈ ಸಂಬಂಧ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ರೇಣುಕಾರಾಜು ಅವರಿಗೆ ಪ್ರಕರಣದ ತನಿಖಾಧಿಕಾರಿ ಹಾಗೂ ಮೈಸೂರು ನಗರ ದೇವರಾಜ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.

ನೋಟಿಸ್‌ನಲ್ಲಿ ಇರುವುದೇನು?
ದಿನಾಂಕ-09/10/2025 ರಂದು ನಜರ್‌ ಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾವು ಅಮೋಘ ಕರ್ನಾಟಕ ಎಂಬ ಸಾಮಾಜಿಕ ಜಾಲತಾಣದಲ್ಲಿ ಸದರಿ ಪ್ರಕರಣದ ನಿಜವಾದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದೀವಿ ಎಂದು ಹೇಳಿರುವ ವಿಚಾರದಲ್ಲಿ ನಮಗೆ ವಿಶ್ವಾಸವಿಲ್ಲ ಈ ಬಗ್ಗೆ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಹೇಳಿಕೆ ನೀಡಿದ್ದು, ಸದರಿ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಇದನ್ನೂ ಓದಿ:-RSS ನೋಂದಣಿ ದಾಖಲೆ ಪತ್ರ ಬಹಿರಂಗ ಪಡಿಸಲು : ಸಚಿವ ಪ್ರಿಯಾಂಕ್‌ ಖರ್ಗೆ ಸವಾಲು

ಈ ಪ್ರಕರಣವು ಘೋರ, ಅತಿ ಸೂಕ್ಷ್ಮ ಹಾಗೂ ಗಂಭೀರ ಪ್ರಕರಣವಾಗಿದ್ದು, ತನಿಖೆಯು ವೈಜ್ಞಾನಿಕವಾಗಿ ಹಾಗೂ ಪಾರದರ್ಶಕವಾಗಿ ಸರಿ ದಾರಿಯಲ್ಲಿ ಸಾಗುತ್ತಿದ್ದರೂ ನೀವು ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡಿ ಪ್ರಚಾರದ ಗೀಳಿಗಾಗಿ ಆಧಾರ ರಹಿತ ಹೇಳಿಕೆಯನ್ನ ನೀಡುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ನಿಮ್ಮ ಮೇಲೆ ಏಕೆ ಕ್ರಮವನ್ನು ತೆಗೆದುಕೊಳ್ಳಬಾರದು ಎಂಬುದಾಗಿ ಈ ಮೂಲಕ ನಿಮಗೆ ನೋಟಿಸ್ ನೀಡುತ್ತಿದ್ದೇವೆ. ನೋಟಿಸ್ ತಲುಪಿದ ಕೂಡಲೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

15 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

25 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

32 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

49 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

2 hours ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago