ಮೈಸೂರು : ಅಕ್ಟೋಬರ್ 9 ರಂದು ನಡೆದ ಬಾಲಕಿ ಮೇಲಿನ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪಿ ಬಂಧನ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ರೇಣುಕಾರಾಜು ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಈ ಸಂಬಂಧ ಬಿಜೆಪಿ ಮಹಿಳಾ ಮೋರ್ಚ ಅಧ್ಯಕ್ಷೆ ರೇಣುಕಾರಾಜು ಅವರಿಗೆ ಪ್ರಕರಣದ ತನಿಖಾಧಿಕಾರಿ ಹಾಗೂ ಮೈಸೂರು ನಗರ ದೇವರಾಜ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ನೋಟಿಸ್ನಲ್ಲಿ ಇರುವುದೇನು?
ದಿನಾಂಕ-09/10/2025 ರಂದು ನಜರ್ ಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾವು ಅಮೋಘ ಕರ್ನಾಟಕ ಎಂಬ ಸಾಮಾಜಿಕ ಜಾಲತಾಣದಲ್ಲಿ ಸದರಿ ಪ್ರಕರಣದ ನಿಜವಾದ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದೀವಿ ಎಂದು ಹೇಳಿರುವ ವಿಚಾರದಲ್ಲಿ ನಮಗೆ ವಿಶ್ವಾಸವಿಲ್ಲ ಈ ಬಗ್ಗೆ ಕೂಲಂಕುಷವಾಗಿ ತನಿಖೆಯಾಗಬೇಕು ಎಂದು ಹೇಳಿಕೆ ನೀಡಿದ್ದು, ಸದರಿ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.
ಇದನ್ನೂ ಓದಿ:-RSS ನೋಂದಣಿ ದಾಖಲೆ ಪತ್ರ ಬಹಿರಂಗ ಪಡಿಸಲು : ಸಚಿವ ಪ್ರಿಯಾಂಕ್ ಖರ್ಗೆ ಸವಾಲು
ಈ ಪ್ರಕರಣವು ಘೋರ, ಅತಿ ಸೂಕ್ಷ್ಮ ಹಾಗೂ ಗಂಭೀರ ಪ್ರಕರಣವಾಗಿದ್ದು, ತನಿಖೆಯು ವೈಜ್ಞಾನಿಕವಾಗಿ ಹಾಗೂ ಪಾರದರ್ಶಕವಾಗಿ ಸರಿ ದಾರಿಯಲ್ಲಿ ಸಾಗುತ್ತಿದ್ದರೂ ನೀವು ಪೊಲೀಸ್ ಇಲಾಖೆಯ ಮೇಲೆ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡಿ ಪ್ರಚಾರದ ಗೀಳಿಗಾಗಿ ಆಧಾರ ರಹಿತ ಹೇಳಿಕೆಯನ್ನ ನೀಡುತ್ತಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ನಿಮ್ಮ ಮೇಲೆ ಏಕೆ ಕ್ರಮವನ್ನು ತೆಗೆದುಕೊಳ್ಳಬಾರದು ಎಂಬುದಾಗಿ ಈ ಮೂಲಕ ನಿಮಗೆ ನೋಟಿಸ್ ನೀಡುತ್ತಿದ್ದೇವೆ. ನೋಟಿಸ್ ತಲುಪಿದ ಕೂಡಲೆ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಿದ್ದಾರೆ.
ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್ಬಾರ್) ನಲ್ಲಿ ಸಂಭವಿಸಿದ ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…
ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…