ಮೈಸೂರು: ಇಲ್ಲಿನ ಜ್ಯೋತಿನಗರದ ಡಿಆರ್ ಮೈದಾನದಲ್ಲಿಂದು ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಸ್ವತ್ತನ್ನು ಮಾಲೀಕರಿಗೆ ಹಿಂದಿರುಗಿಸಿದರು.
ಮೈಸೂರು ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ತೀವ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಖದೀಮರನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿಂದು ಮೈಸೂರಿನ ಜ್ಯೋತಿನಗರದ ಡಿಆರ್ ಮೈದಾನದಲ್ಲಿಂದು ಮಾಲೀಕರಿಗೆ ಅವರವರ ಸ್ವತ್ತನ್ನು ಹಿಂದಿರುಗಿಸಲಾಯಿತು.
ಈ ಬಗ್ಗೆ ಮಾಹಿತಿ ನೀಡಿದ ಎಸಿ ವಿಷ್ಣುವರ್ಧನ್ ಅವರು, 06 ಸುಲಿಗೆ, 06 ಸರಗಳ್ಳತನ, 25 ಮನೆ ಕಳ್ಳತನ, 6 ಸರ್ವೆಂಟ್ ಕಳ್ಳತನ, 67 ವಾಹನ ಕಳ್ಳತನ, 15 ಸಾಮಾನ್ಯ ಕಳ್ಳತನ, 5 ಜಾನುವಾರು ಕಳ್ಳತನ, 4 ವಂಚನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಒಟ್ಟು 2,06,85,504 ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿತ್ತು.
ಈ ಹಿನ್ನೆಲೆಯಲ್ಲಿ ಇಂದು ಒಟ್ಟು 35 ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 2 ಕೆಜಿ 439 ಗ್ರಾಂ ಚಿನ್ನ, 4 ಕೆಜಿ 360 ಬೆಳ್ಳಿ ಹಾಗೂ 18 ಪ್ರಕರಣದಲ್ಲಿ 42,36,585 ರೂಪಾಯಿ ನಗದನ್ನು ಹಿಂದಿರುಗಿಸಲಾಯಿತು ಎಂದು ಮಾಹಿತಿ ನೀಡಿದರು.
ಇನ್ನು 67 ಪ್ರಕರಣದಲ್ಲಿ ಒಟ್ಟು 05 ಕಾರು, 03 ಆಟೋ, 02, ಟ್ರಾಕ್ಟರ್, 03 ಟಿಪ್ಪರ್, 03 ರೋಡ್ ರೋಲರ್, 62 ಮೊಟರ್, 06 ಹಸುಗಳು, 03 ಕುರಿಗಳನ್ನು ಬಂಧಿತ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…
ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…
ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…
ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…
ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್…