ಮೈಸೂರು ನಗರ

ಮೈಸೂರು| ವಶಪಡಿಸಿಕೊಂಡಿದ್ದ ವಸ್ತುಗಳನ್ನು ಮಾಲೀಕರಿಗೆ ಹಿಂತಿರುಗಿಸಿದ ಪೊಲೀಸರು

ಮೈಸೂರು: ಇಲ್ಲಿನ ಜ್ಯೋತಿನಗರದ ಡಿಆರ್‌ ಮೈದಾನದಲ್ಲಿಂದು ಪೊಲೀಸರು ಆರೋಪಿಗಳಿಂದ ವಶಪಡಿಸಿಕೊಂಡಿದ್ದ ಸ್ವತ್ತನ್ನು ಮಾಲೀಕರಿಗೆ ಹಿಂದಿರುಗಿಸಿದರು.

ಮೈಸೂರು ಜಿಲ್ಲೆಯಾದ್ಯಂತ ಕಳೆದ ಕೆಲ ದಿನಗಳಿಂದ ತೀವ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಖದೀಮರನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿಂದು ಮೈಸೂರಿನ ಜ್ಯೋತಿನಗರದ ಡಿಆರ್‌ ಮೈದಾನದಲ್ಲಿಂದು ಮಾಲೀಕರಿಗೆ ಅವರವರ ಸ್ವತ್ತನ್ನು ಹಿಂದಿರುಗಿಸಲಾಯಿತು.

ಈ ಬಗ್ಗೆ ಮಾಹಿತಿ ನೀಡಿದ ಎಸಿ ವಿಷ್ಣುವರ್ಧನ್‌ ಅವರು, 06 ಸುಲಿಗೆ, 06 ಸರಗಳ್ಳತನ, 25 ಮನೆ ಕಳ್ಳತನ, 6 ಸರ್ವೆಂಟ್ ಕಳ್ಳತನ, 67 ವಾಹನ ಕಳ್ಳತನ, 15 ಸಾಮಾನ್ಯ ಕಳ್ಳತನ, 5 ಜಾನುವಾರು ಕಳ್ಳತನ, 4 ವಂಚನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಒಟ್ಟು 2,06,85,504 ಮೌಲ್ಯದ ಮಾಲನ್ನು ವಶಪಡಿಸಿಕೊಳ್ಳಲಾಗಿತ್ತು.

ಈ ಹಿನ್ನೆಲೆಯಲ್ಲಿ ಇಂದು ಒಟ್ಟು 35 ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 2 ಕೆಜಿ 439 ಗ್ರಾಂ ಚಿನ್ನ, 4 ಕೆಜಿ 360 ಬೆಳ್ಳಿ ಹಾಗೂ 18 ಪ್ರಕರಣದಲ್ಲಿ 42,36,585 ರೂಪಾಯಿ ನಗದನ್ನು ಹಿಂದಿರುಗಿಸಲಾಯಿತು ಎಂದು ಮಾಹಿತಿ ನೀಡಿದರು.

ಇನ್ನು 67 ಪ್ರಕರಣದಲ್ಲಿ ಒಟ್ಟು 05 ಕಾರು, 03 ಆಟೋ, 02, ಟ್ರಾಕ್ಟರ್, 03 ಟಿಪ್ಪರ್, 03 ರೋಡ್ ರೋಲರ್, 62 ಮೊಟರ್, 06 ಹಸುಗಳು, 03 ಕುರಿಗಳನ್ನು ಬಂಧಿತ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

16 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

16 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

16 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago