ಮೈಸೂರು: ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಹೋರಾಟ ಸಮಿತಿಯಿಂದ ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ಆಗ್ರಹಿಸಿ ಮಾ.5ರಂದು ಪ್ರತಿಭಟನೆಗೆ ಕರೆ ನೀಡಲಾಗಿದೆ.
ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡುತ್ತಿರುವುದರಿಂದ ಅಭಿವೃದ್ದಿ ಕೆಲಸಗಳು ಕುಂಠಿತವಾಗುತ್ತಿವೆ. ಆದ್ದರಿಂದ ಚುನಾವಣೆ ನಡೆಸಬೇಕೆಂದು ಆಗ್ರಹಿಸಿದ್ದು ಈ ಕುರಿತು ಮುಂದಿನ ಹೋರಾಟದ ರೂಪುರೇಷಗಳ ಬಗ್ಗೆ ನಗರದ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಲದರ್ಶಿನಿ ಸಭಾಂಗಣದಲ್ಲಿ ಸಭೆ ನಡೆಸಲಾಗಿದೆ.
ಮಾ.5ರಂದು ಬೆಳಿಗ್ಗೆ 11 ಗಂಟೆಯಿಂದ ಮಹಾನಗರ ಪಾಲಿಕೆ ಮುಂದೆ ಪ್ರತಿಭಟನೆ. ನಂತರ, ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಅಡುವುದರ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಇತಿಹಾಸ ತಜ್ಞರು ಫ್ರೊ.ನಂಜರಾಜ ಅರಸ್, ಸೋಸಲೆ ಸಿದ್ದರಾಜು, ಅರವಿಂದ್ ಶರ್ಮಾ, ಸೋಮರಾಜ ಅರಸು, ಪುಟ್ಟನಂಜಯ್ಯ ದೇವನೂರು, ಆಮ್ ಆದ್ಮಿ ಪಕ್ಷದ ರಾಮಯ್ಯ, ಕೆಆರ್ಎಸ್ ಪಕ್ಷದ ಮುಖಂಡರು, ಬಿಎಸ್ಪಿ ಪಕ್ಷದ ಮುಖಂಡರು, ಆಮ್ ಆದ್ಮಿ ಪಕ್ಷದ ಮುಖಂಡರು, ಎಸ್ಟಿಪಿಐ ಪಕ್ಷದ ಮುಖಂಡರು ಸಿಪಿಐ ಹಾಗೂ ಕಾರ್ಮಿಕ ಸಂಘಟನೆಯ ಮುಖಂಡರು ಪ್ರಮುಖವಾಗಿ ಭಾಗವಹಿಸಿದ್ದರು.
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…