ಮೈಸೂರು ನಗರ

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ ನಾಣಯ್ಯ (133), ಮೊಹಮ್ಮದ್ ಸಲ್ಮಾನ್ (126), ಎ.ಎಸ್.ಶಿವಸ್ವರೂಪ್ (123) ಅವರು ಚುನಾಯಿತರಾಗಿದ್ದಾರೆ.

ಕ್ಲಬ್‌ನಲ್ಲಿ ಖಾಲಿ ಇದ್ದ 5 ಸದಸ್ಯ ಸ್ಥಾನಗಳಿಗೆ ಮಾ.30 ರಂದು ಕ್ಲಬ್ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಒಟ್ಟು 9 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಸೋಮವಾರ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಡೆದ ಮತದಾನದಲ್ಲಿ ಒಟ್ಟು 201 ಮತಪತ್ರಗಳು ದಾಖಲಾಗಿತ್ತು. ಇವುಗಳಲ್ಲಿ 2 ಮತಪತ್ರಗಳು ಅನೂರ್ಜಿತಗೊಂಡಿದ್ದು, 199 ಮತಪತ್ರಗಳು ಸಿಂಧುವಾಗಿದ್ದವು. 995 ಮತಗಳನ್ನು ದಾಖಲೆಗೆ ಪರಿಗಣಿಸಲಾಯಿತು.

ಉಳಿದಂತೆ ಸ್ಪರ್ಧಾ ಕಣದಲ್ಲಿದ್ದ ಅಯ್ಯಪ್ಪ ಮಂಡೆಪಂಡ ಪೊನ್ನಪ್ಪ (110 ಮತ), ಡಾ.ಚೇತನ್ ರಾಜಣ್ಣ ಚಂದ್ರಕಾಂತ್ (87), ಜೇಡನ್ ಮಾಕ್ ಈಶ್ವರ್ (70 ), ಡಾ.ಕೆ.ಲಿಂಗರಾಜ್ (42 ಮತ) ಅವರು ಹಿನ್ನಡೆ ಅನುಭವಿಸಿದರು.

ಪ್ರಜಾಪ್ರಭುತ್ವದ ಮಾದರಿಯಲ್ಲಿ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಮತ್ತು ಮತದಾನ ಮಾಡಿದ ಸದಸ್ಯರೆಲ್ಲರಿಗೂ ಮೈಸೂರು ರೇಸ್ ಕ್ಲಬ್ ಅಭಾರಿಯಾಗಿದೆ ಎಂದು ಎಂಆರ್‌ಸಿ ಕಾರ್ಯದರ್ಶಿ ಮತ್ತು ಸಿಇಒ ಎನ್‌ಎಚ್‌ಎಸ್ ಮಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

9 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

10 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

11 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

12 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

12 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

16 hours ago