ಮೈಸೂರು ನಗರ

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ ರಾಜ್ಯ ವಕ್ತಾರ ಎಂ.ಲಕ್ಷ್ಮಣ್, ಅಕಸ್ಮಾತ್ ಸ್ಥಳಾಂತರ ಪ್ರಕ್ರಿಯೆಗಳನ್ನು ನಡೆಸಿದರೆ, ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದಿಲ್ಲಿ ಮಾಧ್ಯಮಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಮೈಸೂರು ಮಹಾರಾಜರು ನಿರ್ಮಿಸಿದ ರೈಲ್ವೆ ಗೂಡ್ಸ್‌ ಶೆಡನ್ನು ಮೈಸೂರಿನಿಂದ ಸ್ಥಳಾಂತರಿಸಲು ರಾಜವಂಸ್ಥರೇ ಆದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಮ್ಮತಿ ಸೂಚಿಸಿರುವುದು ದುರಂತದ ಸಂಗತಿ. 1882ರಲ್ಲಿ ಸುಮಾರು ಹತ್ತು ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡ ರೈಲ್ವೆ ಶೆಡ್‌ ಅನ್ನು ಸುಮಾರು 10 ಸಾವಿರ ಜನರು ಅವಲಂಬಿಸಿದ್ದಾರೆ. ಪ್ರತಿ ದಿನ 600ಕ್ಕೂ ಹೆಚ್ಚು ಟ್ರಕ್‌ ಲೋಡ್‌ ಮತ್ತು ಅನ್‌ ಲೋಡ್‌ ಆಗುತ್ತಿದೆ. ರೈಲ್ವೆ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ ರೈಲ್ವೆ ಶೆಡ್‌ನಿಂದ ವಾರ್ಷಿಕ ಸುಮಾರು 4,900 ಕೋಟಿ ರೂ. ವಹಿವಾಟು ನಡೆಯುತ್ತಿದೆ. ಇಂತಹ ಶೆಡನ್ನು ಬೇರೆ ಜಿಲ್ಲೆಗೆ ಸ್ಥಳಾಂತರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಈಗಿರುವ ರೈಲ್ವೆ ಶೆಡ್‌ ಜಾಗದಲ್ಲಿ ವಂದೇ ಮಾತರಂ ರೈಲು ನಿಲುಗಡೆಗೆ ಅವಕಾಶ ಮಾಡಲು ಶೆಡ್‌ ಸ್ಥಳಾಂತರ ಮಾಡುತ್ತಿರುವುದಾಗಿ ಹೇಳಿದ್ದಾರೆ. ಒಂದು ಟ್ರೇನ್‌ ನಿಲ್ಲಿಸಲು ಇಷ್ಟು ದೊಡ್ಡ ವ್ಯಾವಹಾರ ಕೇಂದ್ರವಾಗಿರುವ ಗೂಡ್ಸ್‌ ಶೆಡನ್ನು ಎಚ್.ಡಿ.ಕುಮಾರಸ್ವಾಮಿ ಮತ್ತು ಸೋಮಣ್ಣ ಇಬ್ಬರೂ ಸೇರಿ ಸ್ಥಳಾಂತರಕ್ಕೆ ಸಂಚು ರೂಪಿಸಿದ್ದಾರೆ ಎಂದು ಅಪಾದಿಸಿದರು.

ಕೇಂದ್ರ ಸಚಿವರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದಿಂದ ಹೊಸದಾಗಿ ನಮಗೆ ಯೋಜನೆಗಳನ್ನು ತರುವುದನ್ನು ಬಿಟ್ಟು, ಇಲ್ಲಿರುವ ರೈಲ್ವೆ ಶೆಡನ್ನೇ ತಮ್ಮೂರಿಗೆ ಸ್ಥಳಾಂತರಿಸಲು ಮುಂದಾಗಿದ್ದಾರೆ. ಮುಂದೆ ಚಾಮುಂಡಿಬೆಟ್ಟನೂ ಸ್ಥಳಾಂತರಿಸಿಕೊಂಡರೆ ಮೈಸೂರಿನ ಜನ ಎಲ್ಲಿಗೆ ಹೋಗಬೇಕು ಎಂದು ಲೇವಡಿ ಮಾಡಿದರು.

ಈಗಾಗಲೇ ಕೂಲಿ ಕಾರ್ಮಿಕರು, ಶೆಡ್‌ ಅವಲಂಬಿದ ವರ್ಗಗಳೊಂದಿಗೆ ಸಭೆ ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ರೈಲ್ವೆ ನಿಲ್ದಾಣವನ್ನೇ ಬಂದ್‌ ಮಾಡಿ ಪ್ರತಿಭಟನೆಗೆ ಇಳಿಯುತ್ತೇವೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ಮುಖಂಡರಾದ ಶಿವಣ್ಣ, ಬಿ.ಎಂ.ರಾಮು, ಗೋಪಿನಾಥ್, ಗಿರೀಶ್, ಮಹೇಶ್, ರಾಹುಲ್ ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

23 mins ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

25 mins ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

27 mins ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

28 mins ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

33 mins ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

38 mins ago