ಮೈಸೂರು ನಗರ

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ ರಾಜ್ಯ ವಕ್ತಾರ ಎಂ.ಲಕ್ಷ್ಮಣ್, ಅಕಸ್ಮಾತ್ ಸ್ಥಳಾಂತರ ಪ್ರಕ್ರಿಯೆಗಳನ್ನು ನಡೆಸಿದರೆ, ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದಿಲ್ಲಿ ಮಾಧ್ಯಮಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಮೈಸೂರು ಮಹಾರಾಜರು ನಿರ್ಮಿಸಿದ ರೈಲ್ವೆ ಗೂಡ್ಸ್‌ ಶೆಡನ್ನು ಮೈಸೂರಿನಿಂದ ಸ್ಥಳಾಂತರಿಸಲು ರಾಜವಂಸ್ಥರೇ ಆದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಮ್ಮತಿ ಸೂಚಿಸಿರುವುದು ದುರಂತದ ಸಂಗತಿ. 1882ರಲ್ಲಿ ಸುಮಾರು ಹತ್ತು ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡ ರೈಲ್ವೆ ಶೆಡ್‌ ಅನ್ನು ಸುಮಾರು 10 ಸಾವಿರ ಜನರು ಅವಲಂಬಿಸಿದ್ದಾರೆ. ಪ್ರತಿ ದಿನ 600ಕ್ಕೂ ಹೆಚ್ಚು ಟ್ರಕ್‌ ಲೋಡ್‌ ಮತ್ತು ಅನ್‌ ಲೋಡ್‌ ಆಗುತ್ತಿದೆ. ರೈಲ್ವೆ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ ರೈಲ್ವೆ ಶೆಡ್‌ನಿಂದ ವಾರ್ಷಿಕ ಸುಮಾರು 4,900 ಕೋಟಿ ರೂ. ವಹಿವಾಟು ನಡೆಯುತ್ತಿದೆ. ಇಂತಹ ಶೆಡನ್ನು ಬೇರೆ ಜಿಲ್ಲೆಗೆ ಸ್ಥಳಾಂತರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಈಗಿರುವ ರೈಲ್ವೆ ಶೆಡ್‌ ಜಾಗದಲ್ಲಿ ವಂದೇ ಮಾತರಂ ರೈಲು ನಿಲುಗಡೆಗೆ ಅವಕಾಶ ಮಾಡಲು ಶೆಡ್‌ ಸ್ಥಳಾಂತರ ಮಾಡುತ್ತಿರುವುದಾಗಿ ಹೇಳಿದ್ದಾರೆ. ಒಂದು ಟ್ರೇನ್‌ ನಿಲ್ಲಿಸಲು ಇಷ್ಟು ದೊಡ್ಡ ವ್ಯಾವಹಾರ ಕೇಂದ್ರವಾಗಿರುವ ಗೂಡ್ಸ್‌ ಶೆಡನ್ನು ಎಚ್.ಡಿ.ಕುಮಾರಸ್ವಾಮಿ ಮತ್ತು ಸೋಮಣ್ಣ ಇಬ್ಬರೂ ಸೇರಿ ಸ್ಥಳಾಂತರಕ್ಕೆ ಸಂಚು ರೂಪಿಸಿದ್ದಾರೆ ಎಂದು ಅಪಾದಿಸಿದರು.

ಕೇಂದ್ರ ಸಚಿವರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದಿಂದ ಹೊಸದಾಗಿ ನಮಗೆ ಯೋಜನೆಗಳನ್ನು ತರುವುದನ್ನು ಬಿಟ್ಟು, ಇಲ್ಲಿರುವ ರೈಲ್ವೆ ಶೆಡನ್ನೇ ತಮ್ಮೂರಿಗೆ ಸ್ಥಳಾಂತರಿಸಲು ಮುಂದಾಗಿದ್ದಾರೆ. ಮುಂದೆ ಚಾಮುಂಡಿಬೆಟ್ಟನೂ ಸ್ಥಳಾಂತರಿಸಿಕೊಂಡರೆ ಮೈಸೂರಿನ ಜನ ಎಲ್ಲಿಗೆ ಹೋಗಬೇಕು ಎಂದು ಲೇವಡಿ ಮಾಡಿದರು.

ಈಗಾಗಲೇ ಕೂಲಿ ಕಾರ್ಮಿಕರು, ಶೆಡ್‌ ಅವಲಂಬಿದ ವರ್ಗಗಳೊಂದಿಗೆ ಸಭೆ ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ರೈಲ್ವೆ ನಿಲ್ದಾಣವನ್ನೇ ಬಂದ್‌ ಮಾಡಿ ಪ್ರತಿಭಟನೆಗೆ ಇಳಿಯುತ್ತೇವೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ಮುಖಂಡರಾದ ಶಿವಣ್ಣ, ಬಿ.ಎಂ.ರಾಮು, ಗೋಪಿನಾಥ್, ಗಿರೀಶ್, ಮಹೇಶ್, ರಾಹುಲ್ ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್‌ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…

16 mins ago

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

58 mins ago

ಕೊಡಗು ಜಿಲ್ಲೆಯಲ್ಲಿ ಮನೆ ಗಣತಿ ಕಾರ್ಯ ಚುರುಕು

ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…

4 hours ago

ಏರುತ್ತಿರುವ ತಾಪಮಾನ; ತಂಪು ಪಾನೀಯಗಳಿಗೆ ಮೊರೆ

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…

4 hours ago

ಆಗ ಟೈಲರ್ ಕಾಲ, ಈಗ ಆನ್ ಲೈನ್ ಕಾಲ…

ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…

4 hours ago

ಸೈಕಲ್ಲು, ಸಿರೀಂದ್ರ ಮತ್ತು ನನ್ನ ನಟರಾಜ ಸರ್ವೀಸು

ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…

4 hours ago