ಮೈಸೂರು ನಗರ

ಮೈಸೂರಿನ ರೈಲ್ವೆ ಗೂಡ್ಸ್‌ ಶೆಡ್‌ ಸ್ಥಾಳಾಂತಕ್ಕೆ ಹುನ್ನಾರ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದಲ್ಲಿರುವ ರೈಲ್ವೇ ಗೂಡ್ಸ್‌ ಶೆಡನ್ನು ಪಾಂಡವಪುರಕ್ಕೆ ಸ್ಥಳಾಂತರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿ.ಸೋಮಣ್ಣ ಅವರು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ ರಾಜ್ಯ ವಕ್ತಾರ ಎಂ.ಲಕ್ಷ್ಮಣ್, ಅಕಸ್ಮಾತ್ ಸ್ಥಳಾಂತರ ಪ್ರಕ್ರಿಯೆಗಳನ್ನು ನಡೆಸಿದರೆ, ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇಂದಿಲ್ಲಿ ಮಾಧ್ಯಮಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಮೈಸೂರು ಮಹಾರಾಜರು ನಿರ್ಮಿಸಿದ ರೈಲ್ವೆ ಗೂಡ್ಸ್‌ ಶೆಡನ್ನು ಮೈಸೂರಿನಿಂದ ಸ್ಥಳಾಂತರಿಸಲು ರಾಜವಂಸ್ಥರೇ ಆದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಸಮ್ಮತಿ ಸೂಚಿಸಿರುವುದು ದುರಂತದ ಸಂಗತಿ. 1882ರಲ್ಲಿ ಸುಮಾರು ಹತ್ತು ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡ ರೈಲ್ವೆ ಶೆಡ್‌ ಅನ್ನು ಸುಮಾರು 10 ಸಾವಿರ ಜನರು ಅವಲಂಬಿಸಿದ್ದಾರೆ. ಪ್ರತಿ ದಿನ 600ಕ್ಕೂ ಹೆಚ್ಚು ಟ್ರಕ್‌ ಲೋಡ್‌ ಮತ್ತು ಅನ್‌ ಲೋಡ್‌ ಆಗುತ್ತಿದೆ. ರೈಲ್ವೆ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ ರೈಲ್ವೆ ಶೆಡ್‌ನಿಂದ ವಾರ್ಷಿಕ ಸುಮಾರು 4,900 ಕೋಟಿ ರೂ. ವಹಿವಾಟು ನಡೆಯುತ್ತಿದೆ. ಇಂತಹ ಶೆಡನ್ನು ಬೇರೆ ಜಿಲ್ಲೆಗೆ ಸ್ಥಳಾಂತರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಈಗಿರುವ ರೈಲ್ವೆ ಶೆಡ್‌ ಜಾಗದಲ್ಲಿ ವಂದೇ ಮಾತರಂ ರೈಲು ನಿಲುಗಡೆಗೆ ಅವಕಾಶ ಮಾಡಲು ಶೆಡ್‌ ಸ್ಥಳಾಂತರ ಮಾಡುತ್ತಿರುವುದಾಗಿ ಹೇಳಿದ್ದಾರೆ. ಒಂದು ಟ್ರೇನ್‌ ನಿಲ್ಲಿಸಲು ಇಷ್ಟು ದೊಡ್ಡ ವ್ಯಾವಹಾರ ಕೇಂದ್ರವಾಗಿರುವ ಗೂಡ್ಸ್‌ ಶೆಡನ್ನು ಎಚ್.ಡಿ.ಕುಮಾರಸ್ವಾಮಿ ಮತ್ತು ಸೋಮಣ್ಣ ಇಬ್ಬರೂ ಸೇರಿ ಸ್ಥಳಾಂತರಕ್ಕೆ ಸಂಚು ರೂಪಿಸಿದ್ದಾರೆ ಎಂದು ಅಪಾದಿಸಿದರು.

ಕೇಂದ್ರ ಸಚಿವರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದಿಂದ ಹೊಸದಾಗಿ ನಮಗೆ ಯೋಜನೆಗಳನ್ನು ತರುವುದನ್ನು ಬಿಟ್ಟು, ಇಲ್ಲಿರುವ ರೈಲ್ವೆ ಶೆಡನ್ನೇ ತಮ್ಮೂರಿಗೆ ಸ್ಥಳಾಂತರಿಸಲು ಮುಂದಾಗಿದ್ದಾರೆ. ಮುಂದೆ ಚಾಮುಂಡಿಬೆಟ್ಟನೂ ಸ್ಥಳಾಂತರಿಸಿಕೊಂಡರೆ ಮೈಸೂರಿನ ಜನ ಎಲ್ಲಿಗೆ ಹೋಗಬೇಕು ಎಂದು ಲೇವಡಿ ಮಾಡಿದರು.

ಈಗಾಗಲೇ ಕೂಲಿ ಕಾರ್ಮಿಕರು, ಶೆಡ್‌ ಅವಲಂಬಿದ ವರ್ಗಗಳೊಂದಿಗೆ ಸಭೆ ನಡೆಸಲಾಗಿದ್ದು ಮುಂದಿನ ದಿನಗಳಲ್ಲಿ ರೈಲ್ವೆ ನಿಲ್ದಾಣವನ್ನೇ ಬಂದ್‌ ಮಾಡಿ ಪ್ರತಿಭಟನೆಗೆ ಇಳಿಯುತ್ತೇವೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್, ಮುಖಂಡರಾದ ಶಿವಣ್ಣ, ಬಿ.ಎಂ.ರಾಮು, ಗೋಪಿನಾಥ್, ಗಿರೀಶ್, ಮಹೇಶ್, ರಾಹುಲ್ ಉಪಸ್ಥಿತರಿದ್ದರು.

 

ಆಂದೋಲನ ಡೆಸ್ಕ್

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

10 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

10 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

11 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

11 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

12 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

13 hours ago