ಮೈಸೂರು ನಗರ

ಮೈಸೂರು | ಜಿಲ್ಲೆಯಲ್ಲಿ ಭತ್ತ, ರಾಗಿ ನೋಂದಣಿ ಹಾಗೂ ಖರೀದಿ ಪ್ರಾರಂಭ

ಮೈಸೂರು: 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು ಸರ್ಕಾರವು ಕೆಳಗಿನಂತೆ ದರ ನಿಗದಿಪಡಿಸಿದೆ. ಈ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಕ ಮಾಡಿ, ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಸಾಮಾನ್ಯ ಭತ್ತಕ್ಕೆ2,369,ಗ್ರೇಡ್ ಎ ಭತ್ತಕ್ಕೆ ೨,೩೮೯ ಬೆಂಬಲ ಬೆಲೆ ಘೋಷಿಸಿದ್ದು, ಸೆ.೧೫ ರಿಂದ ಡಿ.೩೧ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪ್ರತಿ ಎಕರೆಗೆ ೨೫ ಕ್ವಿಂಟಲ್‌ನಂತೆ ಗರಿಷ್ಠ ೫೦ ಕ್ವಿಂಟಲ್ ಖರೀದಿ ಪ್ರಮಾಣ ಒಳಗೊಂಡಿದ್ದು, ಖರೀದಿ ಅವಽಯನ್ನು ನ.೦೧ರಿಂದ ೨೦೨೬ರ -.೨೮ರವರೆಗೆ ನಿಗದಿಪಡಿಸಿದೆ.

ರಾಗಿಗೆ ೪,೮೮೬ ಬೆಂಬಲ ಬೆಲೆ ಘೋಷಿಸಿದ್ದು, ಅ.೦೧ರಿಂದ ಡಿ.೧೫ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪ್ರತಿ ಎಕರೆಗೆ ೧೦ ಕ್ವಿಂಟಲ್‌ನಂತೆ ಗರಿಷ್ಠ ೫೦ ಕ್ವಿಂಟಲ್ ಖರೀದಿ ಪ್ರಮಾಣ ಒಳಗೊಂಡಿದ್ದು, ಖರೀದಿ ಅವಧಿಯನ್ನು ೨೦೨೬ರ ಜ.೦೧ರಿಂದ ಮಾ.೩೧ರವರೆಗೆ ನಿಗದಿಪಡಿಸಿದೆ.

ಇದನ್ನು ಓದಿ:  ಕಾಪು | ಟೆಂಪೋ ಪಲ್ಟಿ : ಐವರು ಕಾರ್ಮಿಕರು ದುರ್ಮರಣ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿಯನ್ನು ಮಾರಾಟ ಮಾಡಲು ಇಚ್ಛಿಸುವ ರೈತರು ತಮ್ಮ ತಾಲ್ಲೂಕಿನಲ್ಲಿ ತೆರೆಯಲಾಗಿರುವ ಬೆಂಬಲ ಬೆಲೆ ಯೋಜನೆಯ ನೊಂದಣಿ/ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ, ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಽಕಾರಿಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ನೋಂದಣಿಗಾಗಿ ಎಪಿಎಂಸಿ ಕೇಂದ್ರಗಳಾದ ಮೈಸೂರಿನ ಬಂಡಿಪಾಳ್ಯ, ನಂಜನಗೂಡು, ಟಿ.ನರಸೀಪುರ, ಬನ್ನೂರು, ಹುಣಸೂರು, ಕೆ.ಆರ್.ನಗರ, ಸಾಲಿಗ್ರಾಮದ ಪ್ರವಾಸಿ ಮಂದಿರ (ಶ್ರೀರಾಮ ದೇವಸ್ಥಾನದ ಹತ್ತಿರ) ಚುಂಚನಕಟ್ಟೆ, ಹೆಚ್.ಡಿ.ಕೋಟೆ, ಸರಗೂರು, ಪಿರಿಯಾಪಟ್ಟಣ, ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿ ಹತ್ತಿರ, ಹಾರನಹಳ್ಳಿ ರೈತ ಸಂಪರ್ಕ ಕೇಂದ್ರ ರಾವಂದೂರು ಇಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ೧೫೮ ರೈತರು ೫,೫೧೪ ಕ್ವಿಂಟಲ್ ಭತ್ತ ಹಾಗೂ ೧೬,೪೦೩ ರೈತರು ೩.೮೭, ೩೫೪ ಕ್ವಿಂಟಲ್ ರಾಗಿಯನ್ನು ಬೆಂಬಲ ಬೆಲೆಯಡಿ ಮಾರಾಟ ಮಾಡಲು ನೋಂದಾಯಿಸಿಕೊಂಡಿದ್ದಾರೆ.ಉಳಿದ ರೈತರು ಮಾರಾಟ ಮಾಡಲು ಇಚ್ಛಿಸಿದ್ದಲ್ಲಿ ಕೂಡಲೇ ನಿಗದಿತ ಅವಧಿಯೊಳಗೆ ತಮ್ಮ ತಾಲ್ಲೂಕು ವ್ಯಾಪ್ತಿಯ ನೊಂದಣಿ/ಖರೀದಿ ಕೇಂದ್ರಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

4 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

7 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

8 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

9 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

9 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

10 hours ago