ಮೈಸೂರು ನಗರ

ಮೈಸೂರು | ಜಿಲ್ಲೆಯಲ್ಲಿ ಭತ್ತ, ರಾಗಿ ನೋಂದಣಿ ಹಾಗೂ ಖರೀದಿ ಪ್ರಾರಂಭ

ಮೈಸೂರು: 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು ಸರ್ಕಾರವು ಕೆಳಗಿನಂತೆ ದರ ನಿಗದಿಪಡಿಸಿದೆ. ಈ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಕ ಮಾಡಿ, ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಸಾಮಾನ್ಯ ಭತ್ತಕ್ಕೆ2,369,ಗ್ರೇಡ್ ಎ ಭತ್ತಕ್ಕೆ ೨,೩೮೯ ಬೆಂಬಲ ಬೆಲೆ ಘೋಷಿಸಿದ್ದು, ಸೆ.೧೫ ರಿಂದ ಡಿ.೩೧ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪ್ರತಿ ಎಕರೆಗೆ ೨೫ ಕ್ವಿಂಟಲ್‌ನಂತೆ ಗರಿಷ್ಠ ೫೦ ಕ್ವಿಂಟಲ್ ಖರೀದಿ ಪ್ರಮಾಣ ಒಳಗೊಂಡಿದ್ದು, ಖರೀದಿ ಅವಽಯನ್ನು ನ.೦೧ರಿಂದ ೨೦೨೬ರ -.೨೮ರವರೆಗೆ ನಿಗದಿಪಡಿಸಿದೆ.

ರಾಗಿಗೆ ೪,೮೮೬ ಬೆಂಬಲ ಬೆಲೆ ಘೋಷಿಸಿದ್ದು, ಅ.೦೧ರಿಂದ ಡಿ.೧೫ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪ್ರತಿ ಎಕರೆಗೆ ೧೦ ಕ್ವಿಂಟಲ್‌ನಂತೆ ಗರಿಷ್ಠ ೫೦ ಕ್ವಿಂಟಲ್ ಖರೀದಿ ಪ್ರಮಾಣ ಒಳಗೊಂಡಿದ್ದು, ಖರೀದಿ ಅವಧಿಯನ್ನು ೨೦೨೬ರ ಜ.೦೧ರಿಂದ ಮಾ.೩೧ರವರೆಗೆ ನಿಗದಿಪಡಿಸಿದೆ.

ಇದನ್ನು ಓದಿ:  ಕಾಪು | ಟೆಂಪೋ ಪಲ್ಟಿ : ಐವರು ಕಾರ್ಮಿಕರು ದುರ್ಮರಣ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿಯನ್ನು ಮಾರಾಟ ಮಾಡಲು ಇಚ್ಛಿಸುವ ರೈತರು ತಮ್ಮ ತಾಲ್ಲೂಕಿನಲ್ಲಿ ತೆರೆಯಲಾಗಿರುವ ಬೆಂಬಲ ಬೆಲೆ ಯೋಜನೆಯ ನೊಂದಣಿ/ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ, ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಽಕಾರಿಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ನೋಂದಣಿಗಾಗಿ ಎಪಿಎಂಸಿ ಕೇಂದ್ರಗಳಾದ ಮೈಸೂರಿನ ಬಂಡಿಪಾಳ್ಯ, ನಂಜನಗೂಡು, ಟಿ.ನರಸೀಪುರ, ಬನ್ನೂರು, ಹುಣಸೂರು, ಕೆ.ಆರ್.ನಗರ, ಸಾಲಿಗ್ರಾಮದ ಪ್ರವಾಸಿ ಮಂದಿರ (ಶ್ರೀರಾಮ ದೇವಸ್ಥಾನದ ಹತ್ತಿರ) ಚುಂಚನಕಟ್ಟೆ, ಹೆಚ್.ಡಿ.ಕೋಟೆ, ಸರಗೂರು, ಪಿರಿಯಾಪಟ್ಟಣ, ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿ ಹತ್ತಿರ, ಹಾರನಹಳ್ಳಿ ರೈತ ಸಂಪರ್ಕ ಕೇಂದ್ರ ರಾವಂದೂರು ಇಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ೧೫೮ ರೈತರು ೫,೫೧೪ ಕ್ವಿಂಟಲ್ ಭತ್ತ ಹಾಗೂ ೧೬,೪೦೩ ರೈತರು ೩.೮೭, ೩೫೪ ಕ್ವಿಂಟಲ್ ರಾಗಿಯನ್ನು ಬೆಂಬಲ ಬೆಲೆಯಡಿ ಮಾರಾಟ ಮಾಡಲು ನೋಂದಾಯಿಸಿಕೊಂಡಿದ್ದಾರೆ.ಉಳಿದ ರೈತರು ಮಾರಾಟ ಮಾಡಲು ಇಚ್ಛಿಸಿದ್ದಲ್ಲಿ ಕೂಡಲೇ ನಿಗದಿತ ಅವಧಿಯೊಳಗೆ ತಮ್ಮ ತಾಲ್ಲೂಕು ವ್ಯಾಪ್ತಿಯ ನೊಂದಣಿ/ಖರೀದಿ ಕೇಂದ್ರಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

4 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

5 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

6 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

7 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

7 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

11 hours ago