ಮೈಸೂರು ನಗರ

ಮೈಸೂರು | ಜಿಲ್ಲೆಯಲ್ಲಿ ಭತ್ತ, ರಾಗಿ ನೋಂದಣಿ ಹಾಗೂ ಖರೀದಿ ಪ್ರಾರಂಭ

ಮೈಸೂರು: 2025-26ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು ಸರ್ಕಾರವು ಕೆಳಗಿನಂತೆ ದರ ನಿಗದಿಪಡಿಸಿದೆ. ಈ ಜಿಲ್ಲೆಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ಖರೀದಿ ಏಜೆನ್ಸಿಯನ್ನಾಗಿ ನೇಮಕ ಮಾಡಿ, ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವು ಸಾಮಾನ್ಯ ಭತ್ತಕ್ಕೆ2,369,ಗ್ರೇಡ್ ಎ ಭತ್ತಕ್ಕೆ ೨,೩೮೯ ಬೆಂಬಲ ಬೆಲೆ ಘೋಷಿಸಿದ್ದು, ಸೆ.೧೫ ರಿಂದ ಡಿ.೩೧ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪ್ರತಿ ಎಕರೆಗೆ ೨೫ ಕ್ವಿಂಟಲ್‌ನಂತೆ ಗರಿಷ್ಠ ೫೦ ಕ್ವಿಂಟಲ್ ಖರೀದಿ ಪ್ರಮಾಣ ಒಳಗೊಂಡಿದ್ದು, ಖರೀದಿ ಅವಽಯನ್ನು ನ.೦೧ರಿಂದ ೨೦೨೬ರ -.೨೮ರವರೆಗೆ ನಿಗದಿಪಡಿಸಿದೆ.

ರಾಗಿಗೆ ೪,೮೮೬ ಬೆಂಬಲ ಬೆಲೆ ಘೋಷಿಸಿದ್ದು, ಅ.೦೧ರಿಂದ ಡಿ.೧೫ರವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಪ್ರತಿ ಎಕರೆಗೆ ೧೦ ಕ್ವಿಂಟಲ್‌ನಂತೆ ಗರಿಷ್ಠ ೫೦ ಕ್ವಿಂಟಲ್ ಖರೀದಿ ಪ್ರಮಾಣ ಒಳಗೊಂಡಿದ್ದು, ಖರೀದಿ ಅವಧಿಯನ್ನು ೨೦೨೬ರ ಜ.೦೧ರಿಂದ ಮಾ.೩೧ರವರೆಗೆ ನಿಗದಿಪಡಿಸಿದೆ.

ಇದನ್ನು ಓದಿ:  ಕಾಪು | ಟೆಂಪೋ ಪಲ್ಟಿ : ಐವರು ಕಾರ್ಮಿಕರು ದುರ್ಮರಣ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿಯನ್ನು ಮಾರಾಟ ಮಾಡಲು ಇಚ್ಛಿಸುವ ರೈತರು ತಮ್ಮ ತಾಲ್ಲೂಕಿನಲ್ಲಿ ತೆರೆಯಲಾಗಿರುವ ಬೆಂಬಲ ಬೆಲೆ ಯೋಜನೆಯ ನೊಂದಣಿ/ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ, ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಽಕಾರಿಗಳನ್ನು ಸಂಪರ್ಕಿಸಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ನೋಂದಣಿಗಾಗಿ ಎಪಿಎಂಸಿ ಕೇಂದ್ರಗಳಾದ ಮೈಸೂರಿನ ಬಂಡಿಪಾಳ್ಯ, ನಂಜನಗೂಡು, ಟಿ.ನರಸೀಪುರ, ಬನ್ನೂರು, ಹುಣಸೂರು, ಕೆ.ಆರ್.ನಗರ, ಸಾಲಿಗ್ರಾಮದ ಪ್ರವಾಸಿ ಮಂದಿರ (ಶ್ರೀರಾಮ ದೇವಸ್ಥಾನದ ಹತ್ತಿರ) ಚುಂಚನಕಟ್ಟೆ, ಹೆಚ್.ಡಿ.ಕೋಟೆ, ಸರಗೂರು, ಪಿರಿಯಾಪಟ್ಟಣ, ಬೆಟ್ಟದಪುರ ಗ್ರಾಮ ಪಂಚಾಯಿತಿ ಕಚೇರಿ ಹತ್ತಿರ, ಹಾರನಹಳ್ಳಿ ರೈತ ಸಂಪರ್ಕ ಕೇಂದ್ರ ರಾವಂದೂರು ಇಲ್ಲಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಇದುವರೆಗೆ ೧೫೮ ರೈತರು ೫,೫೧೪ ಕ್ವಿಂಟಲ್ ಭತ್ತ ಹಾಗೂ ೧೬,೪೦೩ ರೈತರು ೩.೮೭, ೩೫೪ ಕ್ವಿಂಟಲ್ ರಾಗಿಯನ್ನು ಬೆಂಬಲ ಬೆಲೆಯಡಿ ಮಾರಾಟ ಮಾಡಲು ನೋಂದಾಯಿಸಿಕೊಂಡಿದ್ದಾರೆ.ಉಳಿದ ರೈತರು ಮಾರಾಟ ಮಾಡಲು ಇಚ್ಛಿಸಿದ್ದಲ್ಲಿ ಕೂಡಲೇ ನಿಗದಿತ ಅವಧಿಯೊಳಗೆ ತಮ್ಮ ತಾಲ್ಲೂಕು ವ್ಯಾಪ್ತಿಯ ನೊಂದಣಿ/ಖರೀದಿ ಕೇಂದ್ರಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

44 mins ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

1 hour ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

2 hours ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

14 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

16 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

17 hours ago