ಮೈಸೂರು ನಗರ

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ 

ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ ಬಿಡದ ಮೈಸೂರಿನ ಮಹಾರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗುಲ್ಸುಮ್, ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ರ‍್ಯಾಂಕ್ ಗಳಿಸಿ ಗಮನ ಸೆಳೆದಿದ್ದಾರೆ.

ಈಚೆಗೆ ಪ್ರಕಟವಾದ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ 586 ಅಂಕ ಗಳಿಸಿದ್ದ ಗುಲ್ಸುಮ್, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಬುಧವಾರ ಬಂದ ಪರಿಷ್ಕೃತ ಫಲಿತಾಂಶದಲ್ಲಿ 5 ಹೆಚ್ಚುವರಿ ಅಂಕ ಸೇರಿ ಒಟ್ಟು 591 ಅಂಕಗಳೊಂದಿಗೆ ರಾಜ್ಯದ ಟಾಪ್-10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬಿಸಿನೆಸ್ ಸ್ಟಡೀಸ್‌ನಲ್ಲಿ ಮೊದಲು 93 ಅಂಕ ಬಂದಿತ್ತು. ಮರು ಮೌಲ್ಯಮಾಪನದ ಬಳಿಕ 98ಕ್ಕೆ ಏರಿಕೆಯಾಗಿದೆ. ಕನ್ನಡ, ಅರ್ಥಶಾಸ್ತ್ರ, ಭೂಗೋಳ, ವಿಜ್ಞಾನ ಮತ್ತು ಅಕೌಂಟೆನ್ಸಿಯಲ್ಲಿ ಶತಕ ಬಾರಿಸಿರುವ ಅವರು, ಇಂಗ್ಲಿಷ್‌ನಲ್ಲಿ 93 ಅಂಕ ಪಡೆದಿದ್ದಾರೆ.

‘ಪರೀಕ್ಷೆ ಚೆನ್ನಾಗಿ ಬರೆದಿದ್ದೆ. ಹೆಚ್ಚು ಅಂಕ ಬರುವ ನಿರೀಕ್ಷೆ ಇತ್ತು. ಅದಕ್ಕೇ ಮರು ಮೌಲ್ಯಮಾಪನಕ್ಕೆ ಹಾಕಿದ್ದೆ. ಈಗ 10ನೇ ರ‍್ಯಾಂಕ್ ಬಂದಿರುವುದು ತುಂಬಾ ಖುಷಿ ಕೊಟ್ಟಿದೆ’ ಎಂದು ಗುಲ್ಸುಮ್ ಸಂತಸ ಹಂಚಿಕೊಂಡಿದ್ದರು. ಇದೇ ವೇಳೆ ಕಾಲೇಜಿನ ವತಿಯಿಂದ ಗುಲ್ಸುಮ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾಲೇಜು ಪ್ರಾಂಶುಪಾಲ ಸೋಮಣ್ಣ ಮಾತನಾಡಿ, ‘ನಮ್ಮ ಕಾಲೇಜಿಗೆ ಪ್ರತಿ ವರ್ಷವೂ ಉತ್ತಮ ಫಲಿತಾಂಶ ಬರುತ್ತಿದೆ. ಇಲ್ಲಿಗೆ ಸೇರುವವರೆಲ್ಲ ಬಡ ಕುಟುಂಬದ ಮಕ್ಕಳು. ಓದುವ ಹಂಬಲ ಇರುವ ಅವರಿಗೆ ನಮ್ಮ ಶಿಕ್ಷಕರು ಶ್ರದ್ಧೆಯಿಂದ ಪಾಠ ಮಾಡುತ್ತಾರೆ ಎಂದರು.

ಪ್ರವೇಶಕ್ಕೆ ನೂಕುನುಗ್ಗಲು
ಸದ್ಯ ಕಾಲೇಜಿನಲ್ಲಿ 2026-27ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ದಿನವೂ ನೂರಾರು ವಿದ್ಯಾರ್ಥಿಗಳು ಅರ್ಜಿಗಾಗಿ ಆಗಮಿಸುತ್ತಿದ್ದಾರೆ. ಈಗಾಗಲೇ ಸಾವಿರಾರು ಅರ್ಜಿ ವಿತರಿಸಲಾಗಿದ್ದು, ಮೆರಿಟ್ ಆಧಾರದಲ್ಲಿ ಕೇವಲ 1,100ರಿಂದ 1,200 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು ಎಂದು ಪ್ರಾಂಶುಪಾಲ ಸೋಮಣ್ಣ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

52 mins ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

3 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

3 hours ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

3 hours ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

9 hours ago

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡು ಹಂದಿ ರಕ್ಷಣೆ

ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…

9 hours ago