ಮೈಸೂರು ನಗರ

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ 

ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ ಬಿಡದ ಮೈಸೂರಿನ ಮಹಾರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗುಲ್ಸುಮ್, ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ರ‍್ಯಾಂಕ್ ಗಳಿಸಿ ಗಮನ ಸೆಳೆದಿದ್ದಾರೆ.

ಈಚೆಗೆ ಪ್ರಕಟವಾದ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ 586 ಅಂಕ ಗಳಿಸಿದ್ದ ಗುಲ್ಸುಮ್, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಬುಧವಾರ ಬಂದ ಪರಿಷ್ಕೃತ ಫಲಿತಾಂಶದಲ್ಲಿ 5 ಹೆಚ್ಚುವರಿ ಅಂಕ ಸೇರಿ ಒಟ್ಟು 591 ಅಂಕಗಳೊಂದಿಗೆ ರಾಜ್ಯದ ಟಾಪ್-10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬಿಸಿನೆಸ್ ಸ್ಟಡೀಸ್‌ನಲ್ಲಿ ಮೊದಲು 93 ಅಂಕ ಬಂದಿತ್ತು. ಮರು ಮೌಲ್ಯಮಾಪನದ ಬಳಿಕ 98ಕ್ಕೆ ಏರಿಕೆಯಾಗಿದೆ. ಕನ್ನಡ, ಅರ್ಥಶಾಸ್ತ್ರ, ಭೂಗೋಳ, ವಿಜ್ಞಾನ ಮತ್ತು ಅಕೌಂಟೆನ್ಸಿಯಲ್ಲಿ ಶತಕ ಬಾರಿಸಿರುವ ಅವರು, ಇಂಗ್ಲಿಷ್‌ನಲ್ಲಿ 93 ಅಂಕ ಪಡೆದಿದ್ದಾರೆ.

‘ಪರೀಕ್ಷೆ ಚೆನ್ನಾಗಿ ಬರೆದಿದ್ದೆ. ಹೆಚ್ಚು ಅಂಕ ಬರುವ ನಿರೀಕ್ಷೆ ಇತ್ತು. ಅದಕ್ಕೇ ಮರು ಮೌಲ್ಯಮಾಪನಕ್ಕೆ ಹಾಕಿದ್ದೆ. ಈಗ 10ನೇ ರ‍್ಯಾಂಕ್ ಬಂದಿರುವುದು ತುಂಬಾ ಖುಷಿ ಕೊಟ್ಟಿದೆ’ ಎಂದು ಗುಲ್ಸುಮ್ ಸಂತಸ ಹಂಚಿಕೊಂಡಿದ್ದರು. ಇದೇ ವೇಳೆ ಕಾಲೇಜಿನ ವತಿಯಿಂದ ಗುಲ್ಸುಮ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾಲೇಜು ಪ್ರಾಂಶುಪಾಲ ಸೋಮಣ್ಣ ಮಾತನಾಡಿ, ‘ನಮ್ಮ ಕಾಲೇಜಿಗೆ ಪ್ರತಿ ವರ್ಷವೂ ಉತ್ತಮ ಫಲಿತಾಂಶ ಬರುತ್ತಿದೆ. ಇಲ್ಲಿಗೆ ಸೇರುವವರೆಲ್ಲ ಬಡ ಕುಟುಂಬದ ಮಕ್ಕಳು. ಓದುವ ಹಂಬಲ ಇರುವ ಅವರಿಗೆ ನಮ್ಮ ಶಿಕ್ಷಕರು ಶ್ರದ್ಧೆಯಿಂದ ಪಾಠ ಮಾಡುತ್ತಾರೆ ಎಂದರು.

ಪ್ರವೇಶಕ್ಕೆ ನೂಕುನುಗ್ಗಲು
ಸದ್ಯ ಕಾಲೇಜಿನಲ್ಲಿ 2026-27ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ದಿನವೂ ನೂರಾರು ವಿದ್ಯಾರ್ಥಿಗಳು ಅರ್ಜಿಗಾಗಿ ಆಗಮಿಸುತ್ತಿದ್ದಾರೆ. ಈಗಾಗಲೇ ಸಾವಿರಾರು ಅರ್ಜಿ ವಿತರಿಸಲಾಗಿದ್ದು, ಮೆರಿಟ್ ಆಧಾರದಲ್ಲಿ ಕೇವಲ 1,100ರಿಂದ 1,200 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು ಎಂದು ಪ್ರಾಂಶುಪಾಲ ಸೋಮಣ್ಣ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

60 mins ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

3 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

3 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

7 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

12 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

12 hours ago