ಮೈಸೂರು ನಗರ

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ 

ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ ಬಿಡದ ಮೈಸೂರಿನ ಮಹಾರಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗುಲ್ಸುಮ್, ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ರ‍್ಯಾಂಕ್ ಗಳಿಸಿ ಗಮನ ಸೆಳೆದಿದ್ದಾರೆ.

ಈಚೆಗೆ ಪ್ರಕಟವಾದ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ 586 ಅಂಕ ಗಳಿಸಿದ್ದ ಗುಲ್ಸುಮ್, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರು. ಬುಧವಾರ ಬಂದ ಪರಿಷ್ಕೃತ ಫಲಿತಾಂಶದಲ್ಲಿ 5 ಹೆಚ್ಚುವರಿ ಅಂಕ ಸೇರಿ ಒಟ್ಟು 591 ಅಂಕಗಳೊಂದಿಗೆ ರಾಜ್ಯದ ಟಾಪ್-10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬಿಸಿನೆಸ್ ಸ್ಟಡೀಸ್‌ನಲ್ಲಿ ಮೊದಲು 93 ಅಂಕ ಬಂದಿತ್ತು. ಮರು ಮೌಲ್ಯಮಾಪನದ ಬಳಿಕ 98ಕ್ಕೆ ಏರಿಕೆಯಾಗಿದೆ. ಕನ್ನಡ, ಅರ್ಥಶಾಸ್ತ್ರ, ಭೂಗೋಳ, ವಿಜ್ಞಾನ ಮತ್ತು ಅಕೌಂಟೆನ್ಸಿಯಲ್ಲಿ ಶತಕ ಬಾರಿಸಿರುವ ಅವರು, ಇಂಗ್ಲಿಷ್‌ನಲ್ಲಿ 93 ಅಂಕ ಪಡೆದಿದ್ದಾರೆ.

‘ಪರೀಕ್ಷೆ ಚೆನ್ನಾಗಿ ಬರೆದಿದ್ದೆ. ಹೆಚ್ಚು ಅಂಕ ಬರುವ ನಿರೀಕ್ಷೆ ಇತ್ತು. ಅದಕ್ಕೇ ಮರು ಮೌಲ್ಯಮಾಪನಕ್ಕೆ ಹಾಕಿದ್ದೆ. ಈಗ 10ನೇ ರ‍್ಯಾಂಕ್ ಬಂದಿರುವುದು ತುಂಬಾ ಖುಷಿ ಕೊಟ್ಟಿದೆ’ ಎಂದು ಗುಲ್ಸುಮ್ ಸಂತಸ ಹಂಚಿಕೊಂಡಿದ್ದರು. ಇದೇ ವೇಳೆ ಕಾಲೇಜಿನ ವತಿಯಿಂದ ಗುಲ್ಸುಮ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾಲೇಜು ಪ್ರಾಂಶುಪಾಲ ಸೋಮಣ್ಣ ಮಾತನಾಡಿ, ‘ನಮ್ಮ ಕಾಲೇಜಿಗೆ ಪ್ರತಿ ವರ್ಷವೂ ಉತ್ತಮ ಫಲಿತಾಂಶ ಬರುತ್ತಿದೆ. ಇಲ್ಲಿಗೆ ಸೇರುವವರೆಲ್ಲ ಬಡ ಕುಟುಂಬದ ಮಕ್ಕಳು. ಓದುವ ಹಂಬಲ ಇರುವ ಅವರಿಗೆ ನಮ್ಮ ಶಿಕ್ಷಕರು ಶ್ರದ್ಧೆಯಿಂದ ಪಾಠ ಮಾಡುತ್ತಾರೆ ಎಂದರು.

ಪ್ರವೇಶಕ್ಕೆ ನೂಕುನುಗ್ಗಲು
ಸದ್ಯ ಕಾಲೇಜಿನಲ್ಲಿ 2026-27ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ. ದಿನವೂ ನೂರಾರು ವಿದ್ಯಾರ್ಥಿಗಳು ಅರ್ಜಿಗಾಗಿ ಆಗಮಿಸುತ್ತಿದ್ದಾರೆ. ಈಗಾಗಲೇ ಸಾವಿರಾರು ಅರ್ಜಿ ವಿತರಿಸಲಾಗಿದ್ದು, ಮೆರಿಟ್ ಆಧಾರದಲ್ಲಿ ಕೇವಲ 1,100ರಿಂದ 1,200 ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುವುದು ಎಂದು ಪ್ರಾಂಶುಪಾಲ ಸೋಮಣ್ಣ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

3 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

3 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

3 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

3 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

3 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

3 hours ago