Land dispute: Fatal attack on a person
ಮೈಸೂರು : ಪಬ್ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್ನಲ್ಲಿ ತಡರಾತ್ರಿ ನಡೆದಿದೆ.
ಗೋಕುಲಂ ನಿವಾಸಿ ನಿಶಾಂತ್ (32) ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಟ್ಯಾಂಕ್ ರಾಕಿ ಸಹಚರರು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಪಬ್ನಲ್ಲಿ ಪಾರ್ಟಿ ಮುಗಿಸಿ ಹೊರಬರುವಾಗ ಘಟನೆ ನಡೆದಿದೆ. ಮೃತ ನಿಶಾಂತ್ ಜತೆ ಸಂದೀಪ್, ದೀಕ್ಷಿತ್ ಮೂವರು ಸ್ನೇಹಿತರಿಂದ ಪಬ್ನಲ್ಲಿ ಪಾರ್ಟಿ ನಡೆದಿದ್ದು, ಪಾರ್ಟಿ ಮಾಡಿ ಹೊರ ಬರುವ ವೇಳೆ
ಕ್ಷುಲ್ಲಕ ವಿಚಾರಕ್ಕೆ ನಿಶಾಂತ್ ಸ್ನೇಹಿತರು ಹಾಗೂ ಟ್ಯಾಂಕ್ ರಾಕಿ ಸಹಚರರ ನಡುವೆ ಗಲಾಟೆ ನಡೆದಿದೆ.
ಇದೇ ವೇಳೆ ಪಬ್ನ ಎರಡನೇ ಮಹಡಿಯಿಂದ ನಿಶಾಂತ್ನನ್ನು ತಳ್ಳಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಎಸ್ಕೇಪ್ ಆಗಿರುವ ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…