Land dispute: Fatal attack on a person
ಮೈಸೂರು : ಪಬ್ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್ನಲ್ಲಿ ತಡರಾತ್ರಿ ನಡೆದಿದೆ.
ಗೋಕುಲಂ ನಿವಾಸಿ ನಿಶಾಂತ್ (32) ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದು, ಟ್ಯಾಂಕ್ ರಾಕಿ ಸಹಚರರು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಪಬ್ನಲ್ಲಿ ಪಾರ್ಟಿ ಮುಗಿಸಿ ಹೊರಬರುವಾಗ ಘಟನೆ ನಡೆದಿದೆ. ಮೃತ ನಿಶಾಂತ್ ಜತೆ ಸಂದೀಪ್, ದೀಕ್ಷಿತ್ ಮೂವರು ಸ್ನೇಹಿತರಿಂದ ಪಬ್ನಲ್ಲಿ ಪಾರ್ಟಿ ನಡೆದಿದ್ದು, ಪಾರ್ಟಿ ಮಾಡಿ ಹೊರ ಬರುವ ವೇಳೆ
ಕ್ಷುಲ್ಲಕ ವಿಚಾರಕ್ಕೆ ನಿಶಾಂತ್ ಸ್ನೇಹಿತರು ಹಾಗೂ ಟ್ಯಾಂಕ್ ರಾಕಿ ಸಹಚರರ ನಡುವೆ ಗಲಾಟೆ ನಡೆದಿದೆ.
ಇದೇ ವೇಳೆ ಪಬ್ನ ಎರಡನೇ ಮಹಡಿಯಿಂದ ನಿಶಾಂತ್ನನ್ನು ತಳ್ಳಿ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಎಸ್ಕೇಪ್ ಆಗಿರುವ ಆರೋಪಿಗಳಿಗಾಗಿ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…