ಮೈಸೂರು ನಗರ

ಮೈಸೂರು ಹೆದ್ದಾರಿ ದರೋಡೆ ಪ್ರಕರಣ: ಮತ್ತೋರ್ವ ಶಂಕಿತ ಆರೋಪಿ ವಶಕ್ಕೆ

ದಿನೇಶ್‌ ಕುಮಾರ್‌ 

ಮೈಸೂರು: ಕೇರಳದ ಉದ್ಯಮಿಯೊಬ್ಬರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರ ತಂಡ ಮತ್ತೋರ್ವ ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿದ್ದು, ಬಂಧಿತರ ಸಂಖ್ಯೆ ಎರಡಕ್ಕೆ ಏರಿದೆ.

ಆರೋಪಿಗಳ ಪತ್ತೆಗೆ ಶ್ರಮಿಸುತ್ತಿರುವ ಪೊಲೀಸರ ತಂಡ ಗುರುವಾರ ಬೆಳಿಗ್ಗೆ ಕೇರಳದಲ್ಲಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತ ದರೋಡೆ ಮಾಡಿದವರೊಂದಿಗೆ ಇದ್ದನು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

ತಾಲ್ಲೂಕಿನ ಜಯಪುರ ಹೋಬಳಿಯ ಹಾರೋಹಳ್ಳಿ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ೯ ಗಂಟೆಯ ಸುಮಾರಿಗೆ ಕೇರಳದ ಸುಲ್ತಾನ್ ಬತ್ತೇರಿ ಉದ್ಯಮಿ ಸೂಫಿ ಅಹ್ಮದ್ ಹಾಗೂ ಅವರೊಂದಿಗಿದ್ದ ಅಶ್ರಫ್ ಎಂಬುವರ ಮೇಲೆ ದಾಳಿ ನಡೆಸಿದ್ದ ದುಷ್ಕರ್ಮಿಗಳು ೧,೫೦ ಲಕ್ಷ ರೂ. ಹಣವನ್ನು ದೋಚಿದ್ದರು.
ಜಿಲ್ಲಾ ಎಸ್‌ಪಿ ವಿಷ್ಣುವರ್ಧನ್ ಅವರು ಆರೋಪಿಗಳ ಪತ್ತೆಗೆ ಮೂರು ತಂಡಗಳನ್ನು ರಚಿಸಿದ್ದಾರೆ. ತಂಡಗಳು ಈಗಾಗಲೇ ಕೇರಳ, ತಮಿಳುನಾಡು ಹಾಗೂ ರಾಜ್ಯದ ವಿವಿಧ ಸ್ಥಳಗಳಿಗೆ ತೆರಳಿ ತನಿಖೆ ನಡೆಸುತ್ತಿವೆ.
ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವವರು ಬಹುತೇಕ ಕೇರಳ ಮೂಲದವರು ಎಂಬುದು ಪೊಲೀಸರಿಗೆ ಖಚಿತವಾಗಿದೆ. ಹೀಗಾಗಿ ಹೆಚ್ಚಿನ ತನಿಖೆ ಮಾಡುವ ಉದ್ದೇಶದಿಂದ ಕೇರಳಕ್ಕೆ ಹೆಚ್ಚಿನ ಪೊಲೀಸರನ್ನು ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ. ಒಂದೆರಡು ದಿನಗಳಲ್ಲಿ ಆರೋಪಿಗಳೆಲ್ಲರನ್ನೂ ಬಂಧಿಸುತ್ತೇವೆ ಎಂದು ಎಸ್‌ಪಿ ವಿಷ್ಣುವರ್ಧನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

18 mins ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

25 mins ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

34 mins ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

46 mins ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

3 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

4 hours ago