ಮೈಸೂರು ನಗರ

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಆರೈಕೆಯಲ್ಲಿ ಸಾಧಿಸಿದ ಪ್ರಮುಖ ಮೈಲಿಗಲ್ಲು ಎಂದು ಅಪೋಲೋ ಆಸ್ಪತ್ರೆಗಳ ಕರ್ನಾಟಕ ರಾಜ್ಯ ಹಿರಿಯ ಉಪಾಧ್ಯಕ್ಷ ಎನ್.ಜಿ.ಭರತೀಶ್ ರೆಡ್ಡಿ ತಿಳಿಸಿದರು.

ನಗರದ ಅಪೋಲೋ ಆಸ್ಪತ್ರೆಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಅತ್ಯಾಧುನಿಕ ರೋಬೊಟಿಕ್ ಶಸಚಿಕಿತ್ಸೆಯ ಮೂಲಕ ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಕಾರ್ಡಿಯೋಥೊರಾಸಿಕ್ ಮತ್ತು ನಾಳೀಯ ಶಸ್ತ್ರಚಿಕಿತ್ಸೆ(ಸಿಟಿವಿಎಸ್), ಇಎನ್‌ಟಿ, ಸ್ತ್ರೀರೋಗ ಶಸ್ತ್ರಚಿಕಿತ್ಸೆ, ಮೂಳೆ ಚಿಕಿತ್ಸೆ, ಆಂಕೋಲಾಜಿ, ಜಠರ ಕರುಳಿನ ಮತ್ತು ಎಚ್‌ಪಿಬಿಗೆ ಸಂಬಂಽಸಿದಂತ ರೋಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳನ್ನು ಒಂದೇ ಸೂರಿನಡಿ ನೀಡಲಾಗುತ್ತದೆ ಎಂದರು.

ರೋಬೊಟಿಕ್ ಶಸ್ತ್ರಚಿಕಿತ್ಸೆಯು ೩ಡಿ ಚಿತ್ರಣದೊಂದಿಗೆ ದೇಹದ ಸೂಕ್ಷ್ಮ ಸ್ಥಳಗಳನ್ನು ನಿಖರವಾಗಿ ನೀಡುತ್ತದೆ. ಅಲ್ಲದೇ ದೇಹದ ಸಂಕೀರ್ಣ ಅಂಗರಚನಾ ಪ್ರದೇಶಗಳನ್ನು ಸುಲಭವಾಗಿ ಕೈಗೆ ಸಿಗುವಂತೆ ಮಾಡುತ್ತದೆ. ಪ್ರಮುಖ ಅಂಗ ರಚನೆಗಳಿಗೆ ರಕ್ಷಣೆ ಒದಗಿಸುತ್ತದೆ. ಇದರಿಂದ ಕಡಿಮೆ ನೋವು, ಕಡಿಮೆ ರಕ್ತದ ನಷ್ಟ ಉಂಟಾಗುತ್ತದೆ. ಅಲ್ಲದೇ, ರೋಗಿಗಳಿಗೆ ತ್ವರಿತ ಚೇತರಿಕೆ ನೀಡುವುದರೊಂದಿಗೆ ಆಸ್ಪತ್ರೆಯ ವಾಸ್ತವ್ಯವನ್ನೂ ಕಡಿಮೆಯಾಗಿಸುತ್ತದೆ ಎಂದರು.

ಶಸ್ತ್ರಚಿಕಿತ್ಸಾ ಗ್ಯಾಸ್ಟ್ರೋ ಎಂಟರಾಲಜಿಸ್ಟ್ ಡಾ.ನೈರುತ್ಯ, ಮೂಳೆ ಶಸ್ತ್ರಚಿಕಿತ್ಸಕ ಡಾ.ವೈ.ಬಿ.ಜಯವರ್ಧನ್, ಮೂಳೆ ಶಸ್ತ್ರಚಿಕಿತ್ಸಕ ಡಾ.ಶ್ರೇಯಸ್ ಆಳ್ವಾ, ಮೂಳೆ ಶಸ್ತ್ರಚಿಕಿತ್ಸಕ ಡಾ.ನಿತಿನ್ ಶ್ರೀಚಂದ್, ಜನರಲ್ ಸರ್ಜನ್ ಡಾ.ಬಿ.ಎನ್.ಜಯಂತ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಎಂ.ಡಿ.ರಶ್ಮಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಎಲ್.ವಿ.ವನಿತಾ, ಸೀನಿಯರ್ ಮೂತ್ರಶಾಸ್ತ್ರಜ್ಞ ಡಾ.ಎಂ.ರಾಘವೇಂದ್ರನ್, ಮೂತ್ರಶಾಸ್ತ್ರಜ್ಞ ಡಾ.ಕಿರಣ್‌ಕುಮಾರ್ ಶೆಟ್ಟಿ, ಶಸ್ತ್ರಚಿಕಿತ್ಸಾ ಆಂಕೋಲಾಜಿಸ್ಟ್ ಡಾ.ವೈ.ರಮ್ಯಾ, ಸಿಟಿವಿಎಸ್ ಸರ್ಜನ್ ಡಾ.ಯೂಸುಫ್ ಮೊಹಮ್ಮದ್ ರಫಿ, ಲಿವರ್ ಟ್ರಾನ್ಸ್‌ಪ್ಲಾಂಟ್ ಸರ್ಜನ್ ಡಾ.ಸಾಗರ್ ನಾರಾಯಣ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

9 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

9 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

9 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

9 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

9 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

9 hours ago