ಮೈಸೂರು ನಗರ

ಮೈಸೂರು | ಅಪೋಲೋ ಆಸ್ಪತ್ರೆಯಲ್ಲಿ ರೋಬೊಟಿಕ್‌ ಶಸ್ತ್ರಚಿಕಿತ್ಸೆ ಸೌಲಭ್ಯ

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಆರೈಕೆಯಲ್ಲಿ ಸಾಧಿಸಿದ ಪ್ರಮುಖ ಮೈಲಿಗಲ್ಲು ಎಂದು ಅಪೋಲೋ ಆಸ್ಪತ್ರೆಗಳ ಕರ್ನಾಟಕ ರಾಜ್ಯ ಹಿರಿಯ ಉಪಾಧ್ಯಕ್ಷ ಎನ್.ಜಿ.ಭರತೀಶ್ ರೆಡ್ಡಿ ತಿಳಿಸಿದರು.

ನಗರದ ಅಪೋಲೋ ಆಸ್ಪತ್ರೆಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ಅತ್ಯಾಧುನಿಕ ರೋಬೊಟಿಕ್ ಶಸಚಿಕಿತ್ಸೆಯ ಮೂಲಕ ಸಾಮಾನ್ಯ ಶಸ್ತ್ರಚಿಕಿತ್ಸೆ, ಮೂತ್ರಶಾಸ್ತ್ರ, ಕಾರ್ಡಿಯೋಥೊರಾಸಿಕ್ ಮತ್ತು ನಾಳೀಯ ಶಸ್ತ್ರಚಿಕಿತ್ಸೆ(ಸಿಟಿವಿಎಸ್), ಇಎನ್‌ಟಿ, ಸ್ತ್ರೀರೋಗ ಶಸ್ತ್ರಚಿಕಿತ್ಸೆ, ಮೂಳೆ ಚಿಕಿತ್ಸೆ, ಆಂಕೋಲಾಜಿ, ಜಠರ ಕರುಳಿನ ಮತ್ತು ಎಚ್‌ಪಿಬಿಗೆ ಸಂಬಂಽಸಿದಂತ ರೋಬೊಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳನ್ನು ಒಂದೇ ಸೂರಿನಡಿ ನೀಡಲಾಗುತ್ತದೆ ಎಂದರು.

ರೋಬೊಟಿಕ್ ಶಸ್ತ್ರಚಿಕಿತ್ಸೆಯು ೩ಡಿ ಚಿತ್ರಣದೊಂದಿಗೆ ದೇಹದ ಸೂಕ್ಷ್ಮ ಸ್ಥಳಗಳನ್ನು ನಿಖರವಾಗಿ ನೀಡುತ್ತದೆ. ಅಲ್ಲದೇ ದೇಹದ ಸಂಕೀರ್ಣ ಅಂಗರಚನಾ ಪ್ರದೇಶಗಳನ್ನು ಸುಲಭವಾಗಿ ಕೈಗೆ ಸಿಗುವಂತೆ ಮಾಡುತ್ತದೆ. ಪ್ರಮುಖ ಅಂಗ ರಚನೆಗಳಿಗೆ ರಕ್ಷಣೆ ಒದಗಿಸುತ್ತದೆ. ಇದರಿಂದ ಕಡಿಮೆ ನೋವು, ಕಡಿಮೆ ರಕ್ತದ ನಷ್ಟ ಉಂಟಾಗುತ್ತದೆ. ಅಲ್ಲದೇ, ರೋಗಿಗಳಿಗೆ ತ್ವರಿತ ಚೇತರಿಕೆ ನೀಡುವುದರೊಂದಿಗೆ ಆಸ್ಪತ್ರೆಯ ವಾಸ್ತವ್ಯವನ್ನೂ ಕಡಿಮೆಯಾಗಿಸುತ್ತದೆ ಎಂದರು.

ಶಸ್ತ್ರಚಿಕಿತ್ಸಾ ಗ್ಯಾಸ್ಟ್ರೋ ಎಂಟರಾಲಜಿಸ್ಟ್ ಡಾ.ನೈರುತ್ಯ, ಮೂಳೆ ಶಸ್ತ್ರಚಿಕಿತ್ಸಕ ಡಾ.ವೈ.ಬಿ.ಜಯವರ್ಧನ್, ಮೂಳೆ ಶಸ್ತ್ರಚಿಕಿತ್ಸಕ ಡಾ.ಶ್ರೇಯಸ್ ಆಳ್ವಾ, ಮೂಳೆ ಶಸ್ತ್ರಚಿಕಿತ್ಸಕ ಡಾ.ನಿತಿನ್ ಶ್ರೀಚಂದ್, ಜನರಲ್ ಸರ್ಜನ್ ಡಾ.ಬಿ.ಎನ್.ಜಯಂತ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಎಂ.ಡಿ.ರಶ್ಮಿ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಎಲ್.ವಿ.ವನಿತಾ, ಸೀನಿಯರ್ ಮೂತ್ರಶಾಸ್ತ್ರಜ್ಞ ಡಾ.ಎಂ.ರಾಘವೇಂದ್ರನ್, ಮೂತ್ರಶಾಸ್ತ್ರಜ್ಞ ಡಾ.ಕಿರಣ್‌ಕುಮಾರ್ ಶೆಟ್ಟಿ, ಶಸ್ತ್ರಚಿಕಿತ್ಸಾ ಆಂಕೋಲಾಜಿಸ್ಟ್ ಡಾ.ವೈ.ರಮ್ಯಾ, ಸಿಟಿವಿಎಸ್ ಸರ್ಜನ್ ಡಾ.ಯೂಸುಫ್ ಮೊಹಮ್ಮದ್ ರಫಿ, ಲಿವರ್ ಟ್ರಾನ್ಸ್‌ಪ್ಲಾಂಟ್ ಸರ್ಜನ್ ಡಾ.ಸಾಗರ್ ನಾರಾಯಣ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

2 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

2 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago