ಮೈಸೂರು ನಗರ

ಮೈಸೂರು | ಡಿ.25ರಂದು ಮನುಸ್ಮೃತಿ ದಹನ ಕುರಿತು ವಿಚಾರ ಸಂಕಿರಣ

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಮನುಸ್ಮೃತಿ ದಹಿಸಿದ 98 ನೇ ವರ್ಷದ ನೆಪದಲ್ಲಿ ಪ್ರಸ್ತುತ ಸಂವಿಧಾನ ವಿರೋಧಿ ಕೃತ್ಯಗಳ ಕುರಿತಾಗಿ ಚರ್ಚಿಸಲು ಡಿ.25ರಂದು ಬೆಳಿಗ್ಗೆ 10;30ಕ್ಕೆ ಮಾನಸಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಒಂದು ದಿನದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್.ಭಾಸ್ಕರ್ ತಿಳಿಸಿದ್ದಾರೆ.

ಸೋಮವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ವಿಚಾರ ಸಂಕಿರಣದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಉರಿಲಿಂಗಿಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ ‘ಸಮಕಾಲೀನ ವಿದ್ಯಮಾನ ಮತ್ತು ಭಾರತದ ಸಂವಿಧಾನ’ ಕುರಿತು ಮಾತನಾಡಲಿದ್ದಾರೆ. ಹಿರಿಯ ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಇದನ್ನು ಓದಿ:  ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನ ಕೊಂದ ಪೋಷಕರು

ವಿಚಾರವಾದಿ ಶಿವಸುಂದರ್ ‘ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮನುಸ್ಮತಿ ಸುಟ್ಟಿದ್ದು ಏಕೆ?’ ವಿಚಾರ ಮಂಡಿಸಲಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಡಿ.ಚಂದ್ರಶೇಖರಯ್ಯ, ಲೇಖಕ ಸಿ.ಹರಕುಮಾರ್, ಮೈಸೂರು ವಿವಿ ಸಂಶೋಧಕರ ಸಂಘದ ಉಪಾಧ್ಯಕ್ಷ ಮಲ್ಲೇಶ್ ಬಾಚಹಳ್ಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಹಿರಿಯ ವೈದ್ಯಾಧಿಕಾರಿ ಡಾ.ಎಸ್.ರಂಗನಾಥಯ್ಯ, ಹಿರಿಯ ದಲಿತ ಹೋರಾಟಗಾರ ಹರಿಹರ ಆನಂದಸ್ವಾಮಿ, ಸಂಗೀತ ವಿವಿಯಿಂದ ಗೌರವ ಡಾಕ್ಟರೇಟ್ ಪುರಸ್ಕ ತ ಜನಾರ್ಧನ್(ಜನ್ನಿ), ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಿಮ್ಮಯ್ಯ ಅವರನ್ನು ಅಭಿನಂದಿಸುವುದಾಗಿ ಹೇಳಿದರು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ರಾಜ್ಯಾಧ್ಯಕ್ಷ ಕೆ.ಎಸ್. ಶಿವರಾಂ, ಎಡಿಜಿಪಿ ತಿಮ್ಮಯ್ಯ, ಮುಖಂಡರಾದ ಯೋಗೇಶ್ ಉಪ್ಪಾರ್, ರವಿನಂದನ್, ಎಂ.ವಿ.ಚಂದ್ರಶೇಖರ್, ಮೈಸೂರು ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಸತ್ಯನಾರಾಯಣ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

3 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

3 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

3 hours ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

3 hours ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

3 hours ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

3 hours ago