ಮೈಸೂರು ನಗರ

ಮೈಸೂರು | ಪಿಸಿ ಮೇಲೆ ಹಲ್ಲೆ, ಮೊಬೈಲ್‌ ದೋಚಿದ ಖದೀಮರು ; ನಾಲ್ವರ ಬಂಧನ

ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್ ದೋಚಿರುವ ಘಟನೆ ನಗರದಲ್ಲಿ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.

ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯ ರಾಜೀವನಗರ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ವಿಶೇಷ ಶಾಖೆಯಲ್ಲಿ ಕೆಲಸ ನಿರ್ವಹಿಸುವ ಹಾಗೂ ಕೆಸರೆ ನಿವಾಸಿ ಚಂದ್ರಶೇಖರ್ ಎಂಬ ಕಾನ್ಸ್‌ಟೆಬಲ್ ಹಲ್ಲೆಗೊಳಗಾದವರು.

ಎನ್‌ಆರ್ ಮೊಹಲ್ಲಾ ನಿವಾಸಿಗಳಾದ ಕಾರ್ತಿಕ್, ಅಮೋಘ್, ವಿಜಯ್ ಹಾಗೂ ಭರತ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಚಂದ್ರಶೇಖರ್ ಅವರು ಜ.೭ರ ಬೆಳಿಗ್ಗೆ ೧೦ ಗಂಟೆ ಸುಮಾರಿಗೆ ಬೈಕ್‌ನಲ್ಲಿ ಕೆಲಸಕ್ಕೆ ಹೋಗುತ್ತಿದ್ದಾಗ ರಸ್ತೆಯ ಅಂಗಡಿಯೊಂದರ ಹಿಂದೆ ಯುವಕರ ಗುಂಪೊಂದು ನಿಂತಿರುವುದನ್ನು ಗಮನಿಸಿದ್ದಾರೆ. ಅವರು ಅಸಂಬದ್ಧವಾಗಿ ಮಾತನಾಡುತ್ತಿದ್ದರಿಂದ ಅವರು ಮಾದಕ ವ್ಯಸನಿಗಳಾಗಿರಬಹುದು ಎಂದು ಅನುಮಾನಿಸಿದ್ದಾರೆ.

ಈ ಸಂಬಂಧ ಅವರನ್ನು ಪ್ರಶ್ನಿಸಿದ್ದಾರೆ. ಇದು ಯುವಕರ ಕೋಪಕ್ಕೆ ಕಾರಣವಾಗಿದೆ. ನಂತರ ಯುವಕರು ಚಂದ್ರಶೇಖರ್ ಅವರೊಡನೆ ಜಗಳಕ್ಕಿಳಿದಿದ್ದಾರೆ. ಗಲಾಟೆಯ ಸಮಯದಲ್ಲಿ, ಆರೋಪಿಗಳಲ್ಲಿ ಒಬ್ಬನು ಚಂದ್ರಶೇಖರ್ ಅವರನ್ನು ಕಲ್ಲಿನಿಂದ ಹೊಡೆದಿದ್ದಾನೆ. ಚಂದ್ರಶೇಖರ್ ಅವರು ತನ್ನನ್ನು ಪೊಲೀಸ್ ಎಂದು ಪರಿಚಯಿಸಿಕೊಂಡ ನಂತರವೂ ಸಹ, ಮೂವರು ಯುವಕರು ಚಂದ್ರಶೇಖರ್ ಅವರ ಬಳಿ ಇದ್ದ ೫೦೦ ರೂ. ನಗದು ಮತ್ತು ಮೊಬೈಲ್ ಫೋನ್ ಕಸಿದು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ಸಾರ್ವಜನಿಕರ ಸಹಾಯದೊಂದಿಗೆ ಆರೋಪಿಗಳಲ್ಲಿ ಒಬ್ಬನಾದ ಕಾರ್ತಿಕ್ ಎಂಬಾತನನ್ನು ಬಂಧಿಸುವಲ್ಲಿ ಚಂದ್ರಶೇಖರ್ ಯಶಸ್ವಿಯಾಗಿದ್ದಾರೆ. ವಿಚಾರಣೆಗಾಗಿ ಕಾರ್ತಿಕ್‌ನನ್ನು ಎನ್.ಆರ್. ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿತ್ತು.

ವಿಚಾರಣೆ ವೇಳೆ ಆರೋಪಿಯು ತನ್ನ ಮೂವರು ಸಹಚರರ ಹೆಸರುಗಳನ್ನು ಬಹಿರಂಗಪಡಿಸಿದ್ದಾನೆ. ಕೂಡಲೇ ಕಾರ್ಯಪ್ರವೃತ್ತರಾದ ಎನ್‌ಆರ್ ಠಾಣಾ ಪೊಲೀಸರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.  ಈ ಸಂಬಂಧ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ನರಸಿಂಹರಾಜ ಉಪವಿಭಾಗದ ಎಸಿಪಿ ಕೆ.ಟಿ.ಮ್ಯಾಥ್ಯೂ ಥಾಮಸ್ ಮತ್ತು ಎನ್.ಆರ್. ಪೊಲೀಸ್ ಇನ್ಸ್‌ಪೆಕ್ಟರ್ ಕುಮಾರ್ ಭೇಟಿ ನೀಡಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಅನುಮಾನ ಬಗೆಹರಿಸಿ

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…

14 hours ago

ಓದುಗರ ಪತ್ರ: ಕನ್ನಡ ಒಗ್ಗಟ್ಟು

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…

14 hours ago

ಓದುಗರ ಪತ್ರ: ರಾಜಕಾರಣದ ಸರಕು!

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…

14 hours ago

ಓದುಗರ ಪತ್ರ: ಅಕ್ಕಿ ದರ ಏರಿಕೆಗೆ ಕಡಿವಾಣ ಅಗತ್ಯ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…

14 hours ago

ಸತ್ಯದ ಪ್ರತಿಪಾದಕರು ಮಾತ್ರ ಆದರ್ಶ ಆಗಬಲ್ಲರು

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…

14 hours ago

300 ಮಕ್ಕಳ ಶಿಕ್ಷಣಕ್ಕೆ ಶೇ.96ರಷ್ಟು ಸಂಪತ್ತನ್ನು ದಾನ ಮಾಡಿದ ಟೆಕ್ಕಿ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…

15 hours ago