ಮೈಸೂರು ನಗರ

ಮೈಸೂರು| ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆ ಅನಾವರಣ

ಮೈಸೂರು: ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಿರ್ಮಾಣವಾಗಿರುವ ಮಾಜಿ ಸಿಎಂ ದಿವಂಗತ ದೇವರಾಜ ಅರಸು ಪ್ರತಿಮೆಯನ್ನು ಸಿಎಂ ಸಿದ್ದರಾಮಯ್ಯ ಅವರಿಂದು ಅನಾವರಣಗೊಳಿಸಿದರು.

ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ನಿರ್ಮಾಣವಾಗಿರುವ ಮಾಜಿ ಸಿಎಂ ದಿವಂಗತ ಡಿ.ದೇವರಾಜ ಅರಸು ಪ್ರತಿಮೆ ಲೋಕಾರ್ಪಣೆ ಮಾಡಲು ಸಮಯ ಕೂಡಿ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌ ಅವರು ನವೆಂಬರ್.‌1ರಂದೇ ಪ್ರತಿಮೆ ಅನಾವರಣಗೊಳಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ಕೂಡ ನಡೆಸಿದ್ದರು.

ಇದನ್ನು ಓದಿ: ಮಂಡ್ಯ| ವಿ.ಸಿ.ನಾಲೆಗೆ ಬಿದ್ದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು. ಸಿಎಂ ಸಿದ್ದರಾಮಯ್ಯ ಜೊತೆ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವೇದಿಕೆ ಹಂಚಿಕೊಂಡಿದ್ದು ವಿಶೇಷವೆನಿಸಿತು.

ಕಾರ್ಯಕ್ರಮದಲ್ಲಿ ಶಾಸಕ ತನ್ವೀರ್ ಸೇಠ್, ಹರೀಶ್ ಗೌಡ, ರವಿಶಂಕರ್, ಪರಿಷತ್ ಸದಸ್ಯ ಹಾಗೂ ಸಿಎಂ ಪುತ್ರ ಡಾ‌.ಯತೀಂದ್ರ ಸಿದ್ದರಾಮಯ್ಯ, ಡಾ.ತಿಮ್ಮಯ್ಯ, ಶಿವಕುಮಾರ್, ಸಿ.ಎನ್‌ಮಂಜೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

13 mins ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

15 mins ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

17 mins ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

19 mins ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

25 mins ago