ಮೈಸೂರು ನಗರ

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ ಮಾಹಿತಿ ಹೊರಬಿದ್ದಿದೆ.

ಆರ್‌ಎಸ್‌ಎಸ್ ಕಾರ್ಯಕರ್ತ ರಾಜು ಕೊಲೆ ಪ್ರಕರಣ ಹಾಗೂ ಶಾಸಕ ತನ್ವೀರ್ ಸೇಠ್ ಕೊಲೆಗೆ ಯತ್ನ ಪ್ರಕರಣದಲ್ಲಿ ಹಬೀದ್ ಪಾಷಾ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೆ, ಕೆಎಫ್‌ಡಿ ಮತ್ತು ಪಿಎಫ್‌ಐ ಸಂಘಟನೆಗಳಲ್ಲೂ ಸಕ್ರಿಯನಾಗಿದ್ದ ಎನ್ನಲಾಗಿದೆ.‌

ಪಿರಿಯಾಪಟ್ಟಣದಲ್ಲಿ ಯುವಕನೊಬ್ಬನ ಹತ್ಯೆಗೆ ಹಬೀದ್ ಪಾಷಾ 30 ಲಕ್ಷ ರೂಪಾಯಿ ಸುಫಾರಿ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆಸ್ತಿ ಗಲಾಟೆ ಹಿನ್ನೆಲೆ ಪಿರಿಯಾಪಟ್ಟಣದ ಸೌಧೆ ವ್ಯಾಪಾರಿ ರಾಜು ಎಂಬುವರಿಂದ ಸುಪಾರಿ ಪಡೆದು, ಅವರ ಸೋದರ ಅಳಿಯ ಪ್ರವೀಣ್ ಕುಮಾರ್ ಹತ್ಯೆಗೆ ಸಂಚು ರೂಪಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣವನ್ನು ಭೇದಿಸಿರುವ ಮೈಸೂರು ಜಿಲ್ಲಾ ಪೊಲೀಸರು, ಹಬೀದ್ ಪಾಷಾ ಗ್ಯಾಂಗ್ ಅನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಹಬೀದ್ ಪಾಷಾ ವಿರುದ್ಧ ಈಗಾಗಲೇ 12 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

35 mins ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

2 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

3 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

3 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

3 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

8 hours ago