ಮೈಸೂರು ನಗರ

ಮೈಸೂರು | ಕಾರಿನ ಗಾಜು ಒಡೆದು 48 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು ; ದೂರು ದಾಖಲು

ಮೈಸೂರು : ರಸ್ತೆ ಬದಿ ನಿಂತಿದ್ದ ಕಾರಿನ ಕಿಟಕಿಯ ಗಾಜು ಒಡೆದ ಕಳ್ಳರು, ಕಾರಿನಲ್ಲಿದ್ದ 48 ಲಕ್ಷ ರೂ. ಮೌಲ್ಯದ 385 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ.

ಕಾರಿನ ಮಾಲೀಕರು ರಾತ್ರಿ ಊಟಕ್ಕೆಂದು ರಸ್ತೆ ಬದಿ ವಾಹನ ನಿಲ್ಲಿಸಿ ತೆರಳಿದ್ದಾಗ ದುಷ್ಕರ್ಮಿಗಳು ಈ ಕೃತ್ಯವೇಸಗಿದ್ದಾರೆ.

ಇದನ್ನು ಓದಿ: ಮೈಸೂರು | ಮನೆಯಲ್ಲಿ ಕಳ್ಳತನ ; ಸುಮಾರು 1 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳು ಕಳ್ಳರ ಪಾಲು

ಮೈಸೂರು-ಹುಣಸೂರು ಹೆದ್ದಾರಿಯ ಇಲವಾಲ ಬಳಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬೆಂಗಳೂರಿನ ನಿವಾಸಿ ರಾಜೇಶ್ ಎಂಬುವರೇ ಚಿನ್ನಾಭರಣ ಕಳೆದುಕೊಂಡವರು. ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದ ರಾಜೇಶ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ವಿರಾಜಪೇಟೆಯಲ್ಲಿನ ಸಂಬಂಧಿಕರ ಮದುವೆಗೆ ತೆರಳಿದ್ದರು. ಈ ವೇಳೆ ರಾತ್ರಿ ಊಟಕ್ಕಾಗಿ ಇಲವಾಲ ಬಳಿಯ ಹೋಟೆಲ್ ಎದುರು ವಾಹನ ನಿಲ್ಲಿಸಲು ಮುಂದಾಗಿದ್ದಾರೆ. ಹೋಟೆಲ್ ಎದುರು ಪಾರ್ಕಿಂಗ್‌ಗೆ ಅವಕಾಶ ಸಿಗದೇ ಇದ್ದುದ್ದರಿಂದ ಹೋಟೆಲ್‌ನಿಂದ ಸ್ವಲ್ಪ ದೂರದಲ್ಲಿ ರಸ್ತೆ ಬದಿ ವಾಹನ ನಿಲ್ಲಿಸಿ ಹೋಟೆಲ್‌ಗೆ ತೆರಳಿದ್ದಾರೆ. ಹೋಟೆಲ್‌ನಲ್ಲಿ ಊಟ ಮುಗಿಸಿಕೊಂಡು ವಾಪಸ್ ಬರುವಷ್ಟರಲ್ಲಿ ಸ್ಥಳದಲ್ಲಿ ಹೊಂಚು ಹಾಕಿದ್ದ ದುಷ್ಕರ್ಮಿಗಳು ಕಾರಿನ ಬಲಭಾಗದ ಸೀಟಿನ ಗಾಜನ್ನು ಒಡೆದು ಕಾರಿನಲ್ಲಿ ಬ್ಯಾಗ್ ಅನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಇಲವಾಲ ಠಾಣೆ ಪೊಲೀಸರು, ಕಾರಿನ ಸುತ್ತ ಮುತ್ತಲೂ ಇರುವ ಸಿಟಿ ಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಕತ್ತಲು ಇದ್ದುದ್ದರಿಂದ ಯಾವುದೇ ಸುಳಿವು ಸಿಕ್ಕಿಲ್ಲ ಕಾರಿನ ಮಾಲೀಕ ರಾಜೇಶ್ ನೀಡಿದ ದೂರಿನ ಮೇರೆಗೆ ಇಲವಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ ಭಾಗದ ರೈತರ ಅಭಿವೃದ್ಧಿಗೆ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆ: ಎನ್ ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…

9 mins ago

ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತದೆ ಎಂದ ಸಚಿವ ಎಂ.ಬಿ.ಪಾಟೀಲ್‌

ಬೆಂಗಳೂರು: ಆರ್‌.ಅಶೋಕ್‌ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್‌…

22 mins ago

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

47 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

52 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

2 hours ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

2 hours ago