ಮೈಸೂರು : ರಸ್ತೆ ಬದಿ ನಿಂತಿದ್ದ ಕಾರಿನ ಕಿಟಕಿಯ ಗಾಜು ಒಡೆದ ಕಳ್ಳರು, ಕಾರಿನಲ್ಲಿದ್ದ 48 ಲಕ್ಷ ರೂ. ಮೌಲ್ಯದ 385 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ.
ಕಾರಿನ ಮಾಲೀಕರು ರಾತ್ರಿ ಊಟಕ್ಕೆಂದು ರಸ್ತೆ ಬದಿ ವಾಹನ ನಿಲ್ಲಿಸಿ ತೆರಳಿದ್ದಾಗ ದುಷ್ಕರ್ಮಿಗಳು ಈ ಕೃತ್ಯವೇಸಗಿದ್ದಾರೆ.
ಇದನ್ನು ಓದಿ: ಮೈಸೂರು | ಮನೆಯಲ್ಲಿ ಕಳ್ಳತನ ; ಸುಮಾರು 1 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳು ಕಳ್ಳರ ಪಾಲು
ಮೈಸೂರು-ಹುಣಸೂರು ಹೆದ್ದಾರಿಯ ಇಲವಾಲ ಬಳಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬೆಂಗಳೂರಿನ ನಿವಾಸಿ ರಾಜೇಶ್ ಎಂಬುವರೇ ಚಿನ್ನಾಭರಣ ಕಳೆದುಕೊಂಡವರು. ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದ ರಾಜೇಶ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ವಿರಾಜಪೇಟೆಯಲ್ಲಿನ ಸಂಬಂಧಿಕರ ಮದುವೆಗೆ ತೆರಳಿದ್ದರು. ಈ ವೇಳೆ ರಾತ್ರಿ ಊಟಕ್ಕಾಗಿ ಇಲವಾಲ ಬಳಿಯ ಹೋಟೆಲ್ ಎದುರು ವಾಹನ ನಿಲ್ಲಿಸಲು ಮುಂದಾಗಿದ್ದಾರೆ. ಹೋಟೆಲ್ ಎದುರು ಪಾರ್ಕಿಂಗ್ಗೆ ಅವಕಾಶ ಸಿಗದೇ ಇದ್ದುದ್ದರಿಂದ ಹೋಟೆಲ್ನಿಂದ ಸ್ವಲ್ಪ ದೂರದಲ್ಲಿ ರಸ್ತೆ ಬದಿ ವಾಹನ ನಿಲ್ಲಿಸಿ ಹೋಟೆಲ್ಗೆ ತೆರಳಿದ್ದಾರೆ. ಹೋಟೆಲ್ನಲ್ಲಿ ಊಟ ಮುಗಿಸಿಕೊಂಡು ವಾಪಸ್ ಬರುವಷ್ಟರಲ್ಲಿ ಸ್ಥಳದಲ್ಲಿ ಹೊಂಚು ಹಾಕಿದ್ದ ದುಷ್ಕರ್ಮಿಗಳು ಕಾರಿನ ಬಲಭಾಗದ ಸೀಟಿನ ಗಾಜನ್ನು ಒಡೆದು ಕಾರಿನಲ್ಲಿ ಬ್ಯಾಗ್ ಅನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಇಲವಾಲ ಠಾಣೆ ಪೊಲೀಸರು, ಕಾರಿನ ಸುತ್ತ ಮುತ್ತಲೂ ಇರುವ ಸಿಟಿ ಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಕತ್ತಲು ಇದ್ದುದ್ದರಿಂದ ಯಾವುದೇ ಸುಳಿವು ಸಿಕ್ಕಿಲ್ಲ ಕಾರಿನ ಮಾಲೀಕ ರಾಜೇಶ್ ನೀಡಿದ ದೂರಿನ ಮೇರೆಗೆ ಇಲವಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…
ಟೆಹ್ರಾನ್ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…
ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…
ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್ವೆಲ್ಗಳನ್ನು…
ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…
ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…