ಮೈಸೂರು ನಗರ

ಮೈಸೂರು | ಕಾರಿನ ಗಾಜು ಒಡೆದು 48 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು ; ದೂರು ದಾಖಲು

ಮೈಸೂರು : ರಸ್ತೆ ಬದಿ ನಿಂತಿದ್ದ ಕಾರಿನ ಕಿಟಕಿಯ ಗಾಜು ಒಡೆದ ಕಳ್ಳರು, ಕಾರಿನಲ್ಲಿದ್ದ 48 ಲಕ್ಷ ರೂ. ಮೌಲ್ಯದ 385 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿದ್ದಾರೆ.

ಕಾರಿನ ಮಾಲೀಕರು ರಾತ್ರಿ ಊಟಕ್ಕೆಂದು ರಸ್ತೆ ಬದಿ ವಾಹನ ನಿಲ್ಲಿಸಿ ತೆರಳಿದ್ದಾಗ ದುಷ್ಕರ್ಮಿಗಳು ಈ ಕೃತ್ಯವೇಸಗಿದ್ದಾರೆ.

ಇದನ್ನು ಓದಿ: ಮೈಸೂರು | ಮನೆಯಲ್ಲಿ ಕಳ್ಳತನ ; ಸುಮಾರು 1 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳು ಕಳ್ಳರ ಪಾಲು

ಮೈಸೂರು-ಹುಣಸೂರು ಹೆದ್ದಾರಿಯ ಇಲವಾಲ ಬಳಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಬೆಂಗಳೂರಿನ ನಿವಾಸಿ ರಾಜೇಶ್ ಎಂಬುವರೇ ಚಿನ್ನಾಭರಣ ಕಳೆದುಕೊಂಡವರು. ಬೆಂಗಳೂರಿನ ಖಾಸಗಿ ಕಂಪೆನಿಯ ಉದ್ಯೋಗಿಯಾಗಿದ್ದ ರಾಜೇಶ್ ಅವರು ಪತ್ನಿ ಮತ್ತು ಮಕ್ಕಳೊಂದಿಗೆ ವಿರಾಜಪೇಟೆಯಲ್ಲಿನ ಸಂಬಂಧಿಕರ ಮದುವೆಗೆ ತೆರಳಿದ್ದರು. ಈ ವೇಳೆ ರಾತ್ರಿ ಊಟಕ್ಕಾಗಿ ಇಲವಾಲ ಬಳಿಯ ಹೋಟೆಲ್ ಎದುರು ವಾಹನ ನಿಲ್ಲಿಸಲು ಮುಂದಾಗಿದ್ದಾರೆ. ಹೋಟೆಲ್ ಎದುರು ಪಾರ್ಕಿಂಗ್‌ಗೆ ಅವಕಾಶ ಸಿಗದೇ ಇದ್ದುದ್ದರಿಂದ ಹೋಟೆಲ್‌ನಿಂದ ಸ್ವಲ್ಪ ದೂರದಲ್ಲಿ ರಸ್ತೆ ಬದಿ ವಾಹನ ನಿಲ್ಲಿಸಿ ಹೋಟೆಲ್‌ಗೆ ತೆರಳಿದ್ದಾರೆ. ಹೋಟೆಲ್‌ನಲ್ಲಿ ಊಟ ಮುಗಿಸಿಕೊಂಡು ವಾಪಸ್ ಬರುವಷ್ಟರಲ್ಲಿ ಸ್ಥಳದಲ್ಲಿ ಹೊಂಚು ಹಾಕಿದ್ದ ದುಷ್ಕರ್ಮಿಗಳು ಕಾರಿನ ಬಲಭಾಗದ ಸೀಟಿನ ಗಾಜನ್ನು ಒಡೆದು ಕಾರಿನಲ್ಲಿ ಬ್ಯಾಗ್ ಅನ್ನು ಎತ್ತಿಕೊಂಡು ಪರಾರಿಯಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಇಲವಾಲ ಠಾಣೆ ಪೊಲೀಸರು, ಕಾರಿನ ಸುತ್ತ ಮುತ್ತಲೂ ಇರುವ ಸಿಟಿ ಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದು, ಸ್ಥಳದಲ್ಲಿ ಕತ್ತಲು ಇದ್ದುದ್ದರಿಂದ ಯಾವುದೇ ಸುಳಿವು ಸಿಕ್ಕಿಲ್ಲ ಕಾರಿನ ಮಾಲೀಕ ರಾಜೇಶ್ ನೀಡಿದ ದೂರಿನ ಮೇರೆಗೆ ಇಲವಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

5 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

5 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

5 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

5 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago