ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಟ್ರಾಫಿಕ್ ನಿರ್ವಹಣೆ ಮಾಡಲು ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಿಂದಲೋ ಪೊಲೀಸರನ್ನು ಕರೆಸಿ ಇಲ್ಲಿ ಟ್ರಾಫಿಕ್ ಮಾಡಲು ಬಿಟ್ಟಿದ್ದಾರೆ. ಅವರಿಗೆ ಟ್ರಾಫಿಕ್ ಕಂಟ್ರೋಲ್ ಮಾಡಲು ಸಾಧ್ಯವಾಗುತ್ತಿಲ್ಲ. ಎಲ್ಲಾ ರಸ್ತೆಗಳಲ್ಲೂ ಅದ್ವಾನವಾಗಿದೆ ಎಂದು ಕಿಡಿಕಾರಿದರು.
ಇನ್ನು ಬೆಂಗಳೂರು ಪೊಲೀಸರಿಗೆ ಟ್ರಾಫಿಕ್ ಬಗ್ಗೆ ತುಂಬಾ ಚೆನ್ನಾಗಿ ಗೊತ್ತು. ಆದರೆ ಹೊರಗಡೆಯವರಿಗೆ ಟ್ರಾಫಿಕ್ ಡ್ಯೂಟಿ ಬಗ್ಗೆ ಏನೂ ಗೊತ್ತಿಲ್ಲ. ಹೀಗಾಗಿ ಮೈಸೂರು ಹಾಗೂ ಬೆಂಗಳೂರು ಪೊಲೀಸರಿಗೆ ಟ್ರಾಫಿಕ್ ನಿರ್ವಹಣೆ ಮಾಡಲು ಬಿಡಬೇಕು ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆಗಳನ್ನು ಒನ್ ವೇ ಮಾಡಿದ್ದಾರೆ. ಇದರಿಂದ ವ್ಯಾಪಾರಸ್ಥರಿಗೆ ತುಂಬಾ ತೊಂದರೆಯಾಗಿದೆ. ವ್ಯಾಪಾರಸ್ಥರು ವ್ಯಾಪಾರ ಮಾಡಲು ಕಷ್ಟವಾಗುತ್ತಿದೆ. ಸರಿಯಾಗಿ ಟ್ರಾಫಿಕ್ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…