ಮೈಸೂರು: ಮೈಸೂರು ದಸರಾ ಮಹೋತ್ಸವದಲ್ಲಿ ಟ್ರಾಫಿಕ್ ನಿರ್ವಹಣೆ ಮಾಡಲು ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್ಲಿಂದಲೋ ಪೊಲೀಸರನ್ನು ಕರೆಸಿ ಇಲ್ಲಿ ಟ್ರಾಫಿಕ್ ಮಾಡಲು ಬಿಟ್ಟಿದ್ದಾರೆ. ಅವರಿಗೆ ಟ್ರಾಫಿಕ್ ಕಂಟ್ರೋಲ್ ಮಾಡಲು ಸಾಧ್ಯವಾಗುತ್ತಿಲ್ಲ. ಎಲ್ಲಾ ರಸ್ತೆಗಳಲ್ಲೂ ಅದ್ವಾನವಾಗಿದೆ ಎಂದು ಕಿಡಿಕಾರಿದರು.
ಇನ್ನು ಬೆಂಗಳೂರು ಪೊಲೀಸರಿಗೆ ಟ್ರಾಫಿಕ್ ಬಗ್ಗೆ ತುಂಬಾ ಚೆನ್ನಾಗಿ ಗೊತ್ತು. ಆದರೆ ಹೊರಗಡೆಯವರಿಗೆ ಟ್ರಾಫಿಕ್ ಡ್ಯೂಟಿ ಬಗ್ಗೆ ಏನೂ ಗೊತ್ತಿಲ್ಲ. ಹೀಗಾಗಿ ಮೈಸೂರು ಹಾಗೂ ಬೆಂಗಳೂರು ಪೊಲೀಸರಿಗೆ ಟ್ರಾಫಿಕ್ ನಿರ್ವಹಣೆ ಮಾಡಲು ಬಿಡಬೇಕು ಎಂದು ಆಗ್ರಹಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಗರದ ಪ್ರಮುಖ ರಸ್ತೆಗಳನ್ನು ಒನ್ ವೇ ಮಾಡಿದ್ದಾರೆ. ಇದರಿಂದ ವ್ಯಾಪಾರಸ್ಥರಿಗೆ ತುಂಬಾ ತೊಂದರೆಯಾಗಿದೆ. ವ್ಯಾಪಾರಸ್ಥರು ವ್ಯಾಪಾರ ಮಾಡಲು ಕಷ್ಟವಾಗುತ್ತಿದೆ. ಸರಿಯಾಗಿ ಟ್ರಾಫಿಕ್ ಕಂಟ್ರೋಲ್ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ಸಲಹೆ ನೀಡಿದರು.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…