ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ಕ್ರಾಫಡ್ ಭವನದಲ್ಲಿ ಶನಿವಾರ ನಡೆದ 105ನೇ ಘಟಿಕೋತ್ಸವದಲ್ಲಿ ಪುರಾತತ್ವ ವಿಷಯದ ಸಂಶೋಧಕ ಶಾಂತರಾಜು.ಎಂ ಅವರಿಗೆ ಪಿಎಚ್.ಡಿ ಪದವಿ ಪ್ರಧಾನ ಮಾಡಲಾಯಿತು.
ವಿವಿ ಕುಲಪತಿ ಪ್ರೊ.ಎನ್.ಕೆ ಲೋಕನಾಥ್ ಅವರು ಪದವಿ ಪ್ರಧಾನ ಮಾಡಿದರು. ಅಖಿಲ ಭಾರತ ವೈದ್ಯಕೀಯ ವಿಜ್ಞನಗಳ ಸಂಸ್ಥೆಯ ನಿರ್ದೇಶಕ ಪ್ರೊ.ಟಿ.ಪಿ ಸಿಂಗ್, ಕುಲಸಚಿವೆ ವಿ.ಆರ್ ಶೈಲಜಾ, ಪ್ರೊ. ಎನ್.ನಾಗರಾಜ್ ಪಾಲ್ಗೊಂಡಿದ್ದರು.
ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಮುಡಿಗುಂಡ ನಿವಾಸಿಯಾದ ಶಾಂತರಾಜು .ಎಂ ಅವರು ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಧ್ಯಾಪಕರಾದ ಡಾ. ಶೋಭಾ ವಿ ಅವರ ಮಾರ್ಗದರ್ಶನ ಪಡೆದಿದ್ದಾರೆ. “ಚಾಮರಾಜನಗರ ಜಿಲ್ಲೆಯ ಬೃಹತ್ ಶಿಲಾಯುಗ ಸಂಸ್ಕೃತಿ” ಎಂಬ ವಿಷಯದ ಬಗ್ಗೆ ಸಂಶೋಧನಾ ಮಹಾಪ್ರಬಂಧ ನಡೆಸಿದ್ದರು.
ಈ ಮಹಾಪ್ರಬಂದವನ್ನು ಕನ್ನಡದಲ್ಲೇ ಸಿದ್ಧಪಡಿಸಿದ್ದೇನೆ. ಮುಂದೆ ಶಿಕ್ಷಕನಾಗಿ ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಗುರಿ ಇದೆ ಎಂದು ಶಾಂತರಾಜು ತಿಳಿಸಿದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…