ಮೈಸೂರು: ಇಲ್ಲಿನ ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್ ಭವನದಲ್ಲಿ ಶನಿವಾರ ನಡೆದ 105ನೇ ಘಟಿಕೋತ್ಸವದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರಿಗೆ ಪಿಎಚ್.ಡಿ ಪದವಿ ಪ್ರಧಾನ ಮಾಡಲಾಯಿತು.
ʻಮಳವಳ್ಳಿ ತಾಲ್ಲೂಕಿನ ಸ್ಥಳನಾಮಗಳು ಸಾಂಸ್ಕೃತಿಕ ಅಧ್ಯಯನ ಎಂಬ ವಿಷಯದಲ್ಲಿ ಮಹಾಪ್ರಬಂಧ ಮಂಡಿಸಿದ್ದರು. ಮಹಾರಾಜ ಕಾಲೇಜಿನ ಕನ್ನಡ ಪ್ರಾಧ್ಯಾಪಕ ವಿಶ್ವನಾಥ್ ಅವರು ಮಾರ್ಗದರ್ಶನ ಮಾಡಿದ್ದರು.