ಮೈಸೂರು : ಮೈಸೂರು ವಿಶ್ವವಿದ್ಯಾನಿಲಯವು ಅಂಕಪಟ್ಟಿ ನೀಡಿಲ್ಲವೆಂದು ಆರೋಪಿಸಿ ರಸ್ತೆಯಲ್ಲಿ ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಬುಧವಾರ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಂಕಪಟ್ಟಿಯನ್ನು ಹಿಂತಿರುಗಿಸಿದರು.
2021-22 ನೇ ಸಾಲಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಭಾ, ಕೋವಿಡ್ ಕಾರಣ ಕಾಲೇಜಿನ ಶುಲ್ಕ ಪಾವತಿಸಿರುವ ಬಗ್ಗೆ ಚಲನ್ ಹಾಜರುಪಡಿಸಲು ಸಾಧ್ಯವಾಗಿರಲಿಲ್ಲ. ಈ ದಿನ ಚಲನ್ ಹಾಜರುಪಡಿಸಿ, ಯಾವುದೇ ಲಂಚ ಆರೋಪ ಮಾಡಿಲ್ಲವೆಂದು ಕುಲಸಚಿವರಾದ ಎಂ.ಕೆ. ಸವಿತಾಗೆ ಮನವಿ ಸಲ್ಲಿಕೆ ಮಾಡಿದರು.
ಇದನ್ನೂ ಓದಿ:-ಮೇಟಿ ಅವರು ಅಹಿಂದ ಸಂಘಟನೆಯಲ್ಲಿ ನನಗೆ ಹೆಗಲಾಗಿದ್ದರು : ಸಿ.ಎಂ ಸಿದ್ದರಾಮಯ್ಯ
ಇದನ್ನು ಪರಿಶೀಲಿಸಿ ಬಾಕಿ ಶುಲ್ಕ ಪಾವತಿ ಬಳಿಕ ವಿದ್ಯಾರ್ಥಿ ಅಂಕಪಟ್ಟಿ ಹಿಂದಿರುಗಿಸಲಾಯಿತು. ಜತೆಗೆ ಇಂತಹ ಸಮಸ್ಯೆಗಳಿದ್ದಾಗ ಮೇಲಾಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ಸಹಾಯ ಪಡೆಯಲು ಕುಲಸಚಿವೆ ಸಲಹೆ ನೀಡಿದರು.





