ಮೈಸೂರು : ಮೈಸೂರು ವಿಶ್ವವಿದ್ಯಾನಿಲಯವು ಅಂಕಪಟ್ಟಿ ನೀಡಿಲ್ಲವೆಂದು ಆರೋಪಿಸಿ ರಸ್ತೆಯಲ್ಲಿ ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಬುಧವಾರ ಕುಲಸಚಿವರಾದ ಎಂ.ಕೆ.ಸವಿತಾ ಅವರು ಅಂಕಪಟ್ಟಿಯನ್ನು ಹಿಂತಿರುಗಿಸಿದರು.
2021-22 ನೇ ಸಾಲಿನ ರಾಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಪ್ರಭಾ, ಕೋವಿಡ್ ಕಾರಣ ಕಾಲೇಜಿನ ಶುಲ್ಕ ಪಾವತಿಸಿರುವ ಬಗ್ಗೆ ಚಲನ್ ಹಾಜರುಪಡಿಸಲು ಸಾಧ್ಯವಾಗಿರಲಿಲ್ಲ. ಈ ದಿನ ಚಲನ್ ಹಾಜರುಪಡಿಸಿ, ಯಾವುದೇ ಲಂಚ ಆರೋಪ ಮಾಡಿಲ್ಲವೆಂದು ಕುಲಸಚಿವರಾದ ಎಂ.ಕೆ. ಸವಿತಾಗೆ ಮನವಿ ಸಲ್ಲಿಕೆ ಮಾಡಿದರು.
ಇದನ್ನೂ ಓದಿ:-ಮೇಟಿ ಅವರು ಅಹಿಂದ ಸಂಘಟನೆಯಲ್ಲಿ ನನಗೆ ಹೆಗಲಾಗಿದ್ದರು : ಸಿ.ಎಂ ಸಿದ್ದರಾಮಯ್ಯ
ಇದನ್ನು ಪರಿಶೀಲಿಸಿ ಬಾಕಿ ಶುಲ್ಕ ಪಾವತಿ ಬಳಿಕ ವಿದ್ಯಾರ್ಥಿ ಅಂಕಪಟ್ಟಿ ಹಿಂದಿರುಗಿಸಲಾಯಿತು. ಜತೆಗೆ ಇಂತಹ ಸಮಸ್ಯೆಗಳಿದ್ದಾಗ ಮೇಲಾಧಿಕಾರಿಗಳನ್ನು ಭೇಟಿ ಮಾಡಿ ಅಗತ್ಯ ಸಹಾಯ ಪಡೆಯಲು ಕುಲಸಚಿವೆ ಸಲಹೆ ನೀಡಿದರು.
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿರುವ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಜಲಾಶಯಕ್ಕೆ…
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…