ಮೈಸೂರು ನಗರ

ಮೈಸೂರು ವಿಶ್ವವಿದ್ಯಾನಿಲಯದ ಪಿಎಚ್‌ಡಿ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಆಹ್ವಾನ

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 2024-25ನೇ ಶೈಕ್ಷಣಿಕ ಸಾಲಿನ ಪಿ.ಎಚ್‌ಡಿ ಪ್ರವೇಶಾತಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪಿಎಚ್‌ಡಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪರೀಕ್ಷೆಯಲ್ಲಿ ಶೇ.55%ರಷ್ಟು ಅಂಕಗಳನ್ನು ಪಡೆದಿರಬೇಕು. ಪಿಎಚ್‌ಡಿ ಪ್ರವೇಶ ಪರೀಕ್ಷೆಯನ್ನು ಬರೆಯಲು ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ. ಅಲ್ಲದೆ ಈ ಪ್ರವೇಶ ಪರೀಕ್ಷೆಯನ್ನು 2017ರ ನಿಯಮಾವಳಿ ಅಡಿ ಸೆಕ್ಷನ್‌ 5.9ರ ಪ್ರಕಾರ ನಡೆಸಲಾಗುವುದು. ಪರೀಕ್ಷೆಯು ಪಾರ್ಟ್‌-ಎನಲ್ಲಿ 50 ಆಬ್‌ಜೆಕ್ಟೀವ್‌ ಮಾರ್ಕ್ಸ್‌ಗಳನ್ನು ಹೊಂದಿರುತ್ತದೆ. ಪಾರ್ಟ್‌-ಬಿ ನಲ್ಲಿ ಪ್ರಬಂಧ ರೀತಿಯ ಮತ್ತು ಕಿರು ಉತ್ತರದ 50 ಪ್ರಶ್ನೆಗಳನ್ನು ಹೊಂದಿದ್ದು, ಒಟ್ಟು 3 ಗಂಟೆಗಳ ಕಾಲ ಪ್ರವೇಶ ಪರೀಕ್ಷೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 2.5 ಲಕ್ಷಗಳ ಮಿತಿಯೊಳಗೆ ಆದಾಯವಿದ್ದರೆ ಎಸ್‌.ಸಿ, ಎಸ್‌ಟಿ ಮತ್ತು CAT-1 ವರ್ಗದ ಜನಾಂಗದವರಿಗೆ 1,250 ರೂ. ಇರುತ್ತದೆ. 2.5 ಲಕ್ಷಗಳ ಮೇಲೆ ಆದಾಯವನ್ನು ಹೊಂದಿರುವ ಎಸ್‌.ಸಿ., ಎಸ್‌.ಟಿ., CAT-1, ಒಬಿಸಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 2,500 ರೂ. ಪ್ರವೇಶಾತಿ ಶುಲ್ಕವಿರುತ್ತದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್‌ 4 ರಿಂದ 24ರವರೆಗೆ https://uni-mysore.ac.in ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ www.uni-mysore.ac.in ವೆಬ್‌ಸೈಟ್‌ ಅಥವಾ ದೂರವಾಣಿ ಸಂಖ್ಯೆ: 0821-2419438 ಅನ್ನು ಸಂಪರ್ಕಿಸಲು ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

3 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

4 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

4 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

4 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

9 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

12 hours ago