ಮೈಸೂರು ನಗರ

ಮೈಸೂರು ವಿಶ್ವವಿದ್ಯಾನಿಲಯ ; ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳ ಪ್ರವೇಶ ನಿರ್ಬಂಧ ಸೇರಿದಂತೆ ಹಲವಾರು ಮಹತ್ವದ ತೀರ್ಮಾನಗಳನ್ನು ಮೈಸೂರು ವಿಶ್ವವಿದ್ಯಾನಿಲಯವು ಕೈಗೊಂಡಿದೆ.

ಮಾನಸಗಂಗೋತ್ರಿ ಕ್ಯಾಂಪಸ್, ಯುವರಾಜ, ಮಹಾರಾಜ ಕಾಲೇಜು ಆವರಣದಲ್ಲಿ ಶಿಸ್ತನ್ನು ತರುವ ಜತೆಗೆ ಅನಧಿಕೃತ ಹೊರಗಿನ ವ್ಯಕ್ತಿಗಳ ಪ್ರವೇಶಕ್ಕೆ ಕಡಿವಾಣ ಹಾಕಲು ವಿ.ವಿ ಕೊನೆಗೂ ಚಾಟಿ ಬೀಸಿದೆ. ಮೈಸೂರು ವಿವಿ ಕ್ರಾಫರ್ಡ್ ಹಾಲ್‌ನಲ್ಲಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಅಧ್ಯಕ್ಷತೆಯಲ್ಲಿ ಶನಿವಾರ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಯ ಅಧಿಕಾರಿಗಳೊಂದಿಗೆ ನಡೆದ ಸಮನ್ವಯ ಸಭೆಯಲ್ಲಿ ಹಲವಾರು ವಿಷಯಗಳ ಕುರಿತು ವಿಸ್ತೃತವಾಗಿ ಚರ್ಚಿಸಿ ತೀರ್ಮಾನಿಸಲಾಯಿತು.

ಅನಧಿಕೃತ ವಿವಿಧ ವಿದ್ಯಾರ್ಥಿ ಸಂಘಟನೆಗಳನ್ನು ನಿಷೇಧಿಸುವುದರ ಅಥವಾ ನಿಯಂತ್ರಣದಲ್ಲಿರುವ ಜತೆಗೆ, ಹೊರಗಿನ ವ್ಯಕ್ತಿಗಳು ಮತ್ತು ಸಂಘಟನೆಗಳಿಗೆ ವಿಶ್ವವಿದ್ಯಾನಿಲಯದ ಕ್ಯಾಂಪಸ್ ಪ್ರವೇಶಿಸುವುದನ್ನು ನಿಷೇಧಿಸಲಾಗುತ್ತಿದೆ. ಮಾನಸಗಂಗೋತ್ರಿ ಆವರಣದಲ್ಲಿ ಫ್ಲೆಕ್ಸ್‌ಗಳನ್ನುತೆರವುಗೊಳಿಸುವುದಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವುದರ ಜತೆಗೆ, ಚಿಕ್ಕಪುಟ್ಟ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ಹೂಡುವುದನ್ನು ಮತ್ತು ಚಿಕ್ಕಪುಟ್ಟ ಲೋಪಗಳಿಗೂ ವಿದ್ಯಾರ್ಥಿಗಳು ಪ್ರತಿಭಟನೆ ಹಮ್ಮಿಕೊಂಡು ವಿಶ್ವವಿದ್ಯಾನಿಲಯದ ಘನತೆಗೆ ಧಕ್ಕೆಯಾಗುವುದನ್ನು ತಡೆಯುವುದನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿ ಸಂಘಟನೆಗಳು, ಇನ್ನಿತರ ವ್ಯಕ್ತಿಗಳು ಮತ್ತು ಸಂಘಟನೆಗಳು ಆಡಳಿತದ ನಿರ್ಧಾರಗಳಲ್ಲಿ ಮಧ್ಯೆ ಪ್ರವೇಶಿಸುವುದನ್ನು ನಿಷೇಧಿಸುವುದು. ವಿದ್ಯಾರ್ಥಿ ಸಂಘಟನೆಗಳು ನಿಯಮಾನುಸಾರದ ತಮ್ಮ ಶೈಕ್ಷಣಿಕ ಅಗತ್ಯದ ಬೇಡಿಕೆಗಳಿಗೆ ಪ್ರತಿಭಟನೆ, ಮುಷ್ಕರಗಳನ್ನು ಹೂಡದೆ ಲಿಖಿತವಾಗಿ ಸಂಬಂಧಪಟ್ಟ ಮುಖ್ಯಸ್ಥರ ಮೂಲಕ ಮನವಿ ಸಲ್ಲಿಸುವಂತೆ ಸೂಚಿಸಲಾಗುತ್ತಿದೆ.

ಇದನ್ನೂ ಓದಿ:-ವಿಶೇಷ ಚೇತನರಿಗೆ ಉದ್ಯೋಗಾವಕಾಶ ಕಲ್ಪಿಸಲು ಸರ್ಕಾರ ಬದ್ಧ

ವಿಶ್ವವಿದ್ಯಾನಿಲಯದ ಆವರಣದಲ್ಲಿ ಶಿಸ್ತಿನಿಂದ ಇರಲು ವ್ಯಸನಮುಕ್ತ ಕ್ಯಾಂಪಸ್ ಮಾಡಲು ಆಗಿಂದಾಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಆಯೋಜಿಸುವುದು, ಗಂಗೋತ್ರಿ ಕ್ಯಾಂಪಸ್ ಸುರಕ್ಷತೆ, ವಿದ್ಯಾರ್ಥಿನಿಲಯಗಳ ಮೇಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೀವ್ರ ನಿಗಾ ಇರಿಸುವುದು. ಅನಧಿಕೃತ ಮಳಿಗೆಗಳನ್ನು ತೆರವುಗೊಳಿಸುವುದರ ಜತೆಗೆ, ಕಾನೂನುಬಾಹಿರ ವಸ್ತುಗಳ ಮೂಲವನ್ನು ನಿಷೇಧಿಸುವುದು. ಸಾರ್ವಜನಿಕರ ವಾಹನಗಳು ಮಾನಸಗಂಗೋತ್ರಿಯ ಒಳಗೆ ನಿಷೇಧಿಸುವುದು, ಘಟಿಕೋತ್ಸವ-೨೦೨೬ಕ್ಕೆ ಸೂಕ್ತ ಬಂದೋಬಸ್ತ್ ಒದಗಿಸುವುದಕ್ಕೆ ತೀರ್ಮಾನಿಸಲಾಯಿತು. ಶಿಕ್ಷಕರು, ಅಧಿಕಾರಿ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲಾಗುತ್ತಿರುವುದರ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು.

ಕುಲಸಚಿವರಾದ ಎಂ.ಕೆ.ಸವಿತ, ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜು, ಹಣಕಾಸು ಅಧಿಕಾರಿ ಕೆ.ಎಸ್.ರೇಖಾ, ಪೊಲೀಸ್ ಅಧಿಕಾರಿಗಳಾದ ಕುಮಾರ್, ಬಿ.ಎಸ್.ರವಿಶಂಕರ್, ಲಕ್ಕಪ್ಪಕುಕ್ಕಡಿ, ಭವ್ಯ, ವಿವಿ ಆಡಳಿತಾಧಿಕಾರಿ, ನಿರ್ದೇಶಕರು, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳು, ವಿವಿಧ ನಿಕಾಯಗಳ ಡೀನ್‌ಗಳು, ವಿಭಾಗಗಳ ನಿರ್ದೇಶಕರು, ಘಟಕ ಕಾಲೇಜುಗಳ ಮುಖ್ಯಸ್ಥರು, ಕಾರ್ಯಪಾಲಕ ಅಭಿಯಂತರರು, ಭದ್ರತಾಧಿಕಾರಿಗಳು, ಉಪ ಕುಲಸಚಿವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

8 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

9 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

9 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

9 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

9 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

9 hours ago