ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ ನಡೆಸಿತು.
ವಿ.ವಿಯ ಪಿ.ಜಿ ಹಾಸ್ಟಲ್ ಬಳಿ ಬುಧವಾರ ಪ್ರತಿಭಟನೆಗೆ ಕೂತ ವಿದ್ಯಾರ್ಥಿಗಳು, ಕುಡಿಯುವ ನೀರಿನ ಫಿಲ್ಟರ್ ವಾಟರ್ ಮತ್ತು ಬಿಸಿ ನೀರಿನ ಗೀಜರ್ ವ್ಯವಸ್ಥೆಯನ್ನು ಯು.ಜಿ ಮತ್ತು ಪಿ.ಜಿಯ ಪುರುಷ ಮತ್ತು ಮಹಿಳಾ ನಿಲಯಗಳಿಗೆ ಒದಗಿಸಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕಾಗಮಿಸಿದ ಮೈ ವಿ.ವಿ ಮುಖ್ಯ ಅಭಿಯಂತಕರು ಪ್ರತಿಭಟನಾಕಾರರ ಆಹವಾಲನ್ನು ಸ್ವೀಕರಿಸಿ ಕೂಡಲೇ ಎರಡೇ ದಿನದಲ್ಲಿ ನಿಮ್ಮೆಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳು ಶಾಂತಿಯಿಂದ ಪ್ರತಿಭಟನೆಯನ್ನು ಕೈಬಿಟ್ಟರು.
ಇದನ್ನೂ ಓದಿ:-ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ
ಸಂಶೋಧಕ ಶಿವಶಂಕರ್, ವಿದ್ಯಾರ್ಥಿ ಮುಖಂಡ ಕೃಷ್ಣಮೂರ್ತಿ ಗಣಿಗನೂರು, ಯುವ ಹೋರಾಟಗಾರ ಹಾಗು ಸಂಶೋಧಕರದ ಪ್ರದೀಪ್ ಮುಮ್ಮಡಿ, ಮಹೇಶ್ ಪಿ.ಮರಳ್ಳಿ, ಸಂದೇಶ್ ಮನಗಳ್ಳಿ, ಕಾರ್ತಿಕ್ ತಗಡೂರು, ಪ್ರೀತಮ್ ಅಂಚಿಪುರ, ರವಿಕುಮಾರ್ ಮುಡಿಗುಂಡ, ಸಿದ್ದಾರ್ಥ್, ಅವಿನಾಶ್.ಜಿ, ಕೆ.ಎನ್.ಕವಿರಾಜ್, ಧೀರಾಜ್, ಬಾಬು ಹಾಗು ಡಿ.ಎಸ್.ಎಫ್ ಮಾಜಿ ಕಾರ್ಯದರ್ಶಿ ಗೌತಮ್ ಕೋಟೆ ಮತ್ತು ತೇಜಸ್ ಮೋಹನ್ ದಾಸ್ ಮತ್ತಿತರ ವಿದ್ಯಾರ್ಥಿಗಳು ಹಾಗೂ ಸಂಶೋಧಕರು ಪ್ರತಿಭಟನೆಯಲ್ಲಿದ್ದರು.
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…
ಡಾ.ಪಿ.ಮಂಜುನಾಥ ನಕಾರಾತ್ಮಕ ಭಾವನೆ ಮಕ್ಕಳಲ್ಲಿ ಮೂಡದಂತೆ ಎಚ್ಚರ ಅಗತ್ಯ ಪರೀಕ್ಷೆಗಳು ಕೆಲವೇ ತಿಂಗಳುಗಳಲ್ಲಿ ಸಾಲು ಸಾಲಾಗಿ ಪ್ರಾರಂಭವಾಗಲಿವೆ. ಪರೀಕ್ಷೆ ಹತ್ತಿರವಾಗುತ್ತಿದ್ದಂತೆ…
೨೦೨೫ ನೇ ಸಾಲಿನಲ್ಲಿ ಹಲವಾರು ಸಾಧಕರು ಹೊರಹೊಮ್ಮಿದ್ದು, ಸಾಹಿತ್ಯ, ಕಲೆ, ವಿಜ್ಞಾನ, ಸಂಶೋಧನೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ,…