ಮೈಸೂರು ನಗರ

ಮೈಸೂರು ವಿ.ವಿ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ ನಡೆಸಿತು.

ವಿ.ವಿಯ ಪಿ.ಜಿ ಹಾಸ್ಟಲ್‌ ಬಳಿ ಬುಧವಾರ ಪ್ರತಿಭಟನೆಗೆ ಕೂತ ವಿದ್ಯಾರ್ಥಿಗಳು, ಕುಡಿಯುವ ನೀರಿನ ಫಿಲ್ಟರ್ ವಾಟರ್ ಮತ್ತು ಬಿಸಿ ನೀರಿನ ಗೀಜರ್ ವ್ಯವಸ್ಥೆಯನ್ನು ಯು.ಜಿ ಮತ್ತು ಪಿ.ಜಿಯ ಪುರುಷ ಮತ್ತು ಮಹಿಳಾ ನಿಲಯಗಳಿಗೆ ಒದಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕಾಗಮಿಸಿದ ಮೈ ವಿ.ವಿ ಮುಖ್ಯ ಅಭಿಯಂತಕರು ಪ್ರತಿಭಟನಾಕಾರರ ಆಹವಾಲನ್ನು ಸ್ವೀಕರಿಸಿ ಕೂಡಲೇ ಎರಡೇ ದಿನದಲ್ಲಿ ನಿಮ್ಮೆಲ್ಲ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು. ಬಳಿಕ ವಿದ್ಯಾರ್ಥಿಗಳು ಶಾಂತಿಯಿಂದ ಪ್ರತಿಭಟನೆಯನ್ನು ಕೈಬಿಟ್ಟರು.

ಇದನ್ನೂ ಓದಿ:-ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಸಂಶೋಧಕ ಶಿವಶಂಕರ್, ವಿದ್ಯಾರ್ಥಿ ಮುಖಂಡ ಕೃಷ್ಣಮೂರ್ತಿ ಗಣಿಗನೂರು, ಯುವ ಹೋರಾಟಗಾರ ಹಾಗು ಸಂಶೋಧಕರದ ಪ್ರದೀಪ್ ಮುಮ್ಮಡಿ, ಮಹೇಶ್ ಪಿ.ಮರಳ್ಳಿ, ಸಂದೇಶ್ ಮನಗಳ್ಳಿ, ಕಾರ್ತಿಕ್ ತಗಡೂರು, ಪ್ರೀತಮ್ ಅಂಚಿಪುರ, ರವಿಕುಮಾರ್ ಮುಡಿಗುಂಡ, ಸಿದ್ದಾರ್ಥ್, ಅವಿನಾಶ್.ಜಿ, ಕೆ.ಎನ್.ಕವಿರಾಜ್, ಧೀರಾಜ್, ಬಾಬು ಹಾಗು ಡಿ.ಎಸ್.ಎಫ್ ಮಾಜಿ ಕಾರ್ಯದರ್ಶಿ ಗೌತಮ್ ಕೋಟೆ ಮತ್ತು ತೇಜಸ್ ಮೋಹನ್ ದಾಸ್ ಮತ್ತಿತರ ವಿದ್ಯಾರ್ಥಿಗಳು ಹಾಗೂ ಸಂಶೋಧಕರು ಪ್ರತಿಭಟನೆಯಲ್ಲಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

28 mins ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

29 mins ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

45 mins ago

ಶಬರಿಮಲೆ ವಿವಾದ: ವಿಚಾರಣೆಗೆ ಸಾಂವಿಧಾನಿಕ ಪೀಠ ರಚನೆ

ನವದೆಹಲಿ: ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನ ಸೇರಿದಂತೆ ಧಾರ್ಮಿಕ ಸ್ಥಳಗಳಿಗೆ ಮಹಿಳೆಯರ ಪ್ರವೇಶದ ವಿರುದ್ಧ ಮತ್ತು ಧರ್ಮಗಳಲ್ಲಿ ಮಹಿಳೆಯರ ಮೇಲಿನ…

1 hour ago

ಗುಂಡ್ಲುಪೇಟೆ| ಕಾಡಿನಿಂದ‌ ದಾರಿ ತಪ್ಪಿ ಮನೆಗೆ ನುಗ್ಗಿದ ಜಿಂಕೆ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಿನಿಂದ ದಾರಿತಪ್ಪಿ ಬಂದು ಮನೆಗೆ ನುಗ್ಗಿದ್ದ ಜಿಂಕೆಯನ್ನು ರಕ್ಷಣೆ ಮಡುವಲ್ಲಿ ಅರಣ್ಯ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡಗೆ ಬಿಗ್‌ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ…

3 hours ago