ಮೈಸೂರು ನಗರ

ಮೈಸೂರು | ಸೆಸ್ಕ್ ಕಚೇರಿಯಲ್ಲಿ ಮೇಲ್ದರ್ಜೆಗೇರಿಸಿದ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಉದ್ಘಾಟನೆ

ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮಹತ್ವದ ಹೆಜ್ಜೆ ಇರಿಸಿದ್ದು, ನಿಗಮದ ಕಚೇರಿಯ ಆವರಣದಲ್ಲಿ ವಿದ್ಯುತ್ ವಾಹನಗಳಿಗಾಗಿ(ಇವಿ) ಮೇಲ್ದರ್ಜೆಗೇರಿಸಿದ ಅತ್ಯಾಧುನಿಕ 30 ಕೆವಿ ಫಾಸ್ಟ್ ಚಾರ್ಜಿಂಗ್ ಘಟಕವನ್ನು ಉದ್ಘಾಟಿಸಲಾಯಿತು.

ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ನಿಗಮ ಕಚೇರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೆಸ್ಕ್‌ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಈ ಚಾರ್ಜಿಂಗ್ ಘಟಕವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ರಮೇಶ್‌ ಬಂಡಿಸಿದ್ದೇಗೌಡ, “ಇತ್ತೀಚೆಗೆ ಎಲೆಕ್ಟ್ರಿಕ್‌ ವಾಹನಗಳ ಬಳಕೆ ಪ್ರಮಾಣ ಹೆಚ್ಚಾಗುತ್ತಿದ್ದು, ನಿಗಮದ ವತಿಯಿಂದ ಇವಿ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ. ಇದರಿಂದ ವಾಯುಮಾಲಿನ್ಯ ತಡೆಯುವ ಜತೆಗೆ ಇಂಧನದ ಆಮದು ಅವಲಂಬನೆ ತಗ್ಗಿಸಿ, ಹಸಿರು ಶಕ್ತಿಯ ಬಳಕೆಯನ್ನು ಉತ್ತೇಜಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ,” ಎಂದರು.

ಇದನ್ನು ಓದಿ: ಗರ್ಭಿಣ ಹತ್ಯೆ | ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು

ನಿಗಮದ ಕಚೇರಿಯಲ್ಲಿ ಈ ಹಿಂದೆ ಇದ್ದ ಇವಿ ಚಾರ್ಜಿಂಗ್‌ ಘಟಕದ ಸಾಮರ್ಥ್ಯವನ್ನು ಪ್ರಸ್ತುತ 30 ಕೆವಿ ಫಾಸ್ಟ್‌ ಚಾರ್ಜಿಂಗ್‌ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲಾಗಿದ್ದು, ಒಂದೇ ಸಮಯದಲ್ಲಿ ಎರಡು ಕಾರುಗಳನ್ನು ಚಾರ್ಜ್ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಇರುವುದರಿಂದ ಒಂದು ಕಾರನ್ನು 40ರಿಂದ 45 ನಿಮಿಷದಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಲು ಸಾಧ್ಯವಾಗುತ್ತದೆ.

“ಝಿಯಾನ್‌ ಎಲೆಕ್ಟ್ರಿಕ್‌ ಸಂಸ್ಥೆ ಸಹಯೋಗದೊಂದಿಗೆ ನೂತನ ಇವಿ ಚಾರ್ಜಿಂಗ್ ಘಟಕ ಆರಂಭಿಸಿದ್ದು, ಝಿಯಾನ್ ಆ್ಯಪ್ ಮೂಲಕ ಚಾರ್ಜಿಂಗ್‌ ಹಬ್‌ ಬಳಸಬಹುದು. ಹೊಸದಾಗಿ ಆರಂಭಿಸಿರುವ ಇವಿ ಚಾರ್ಜಿಂಗ್‌ ಘಟಕವನ್ನು ಪ್ರಾಯೋಗಿಕವಾಗಿ ಸೆಸ್ಕ್ ಕಚೇರಿಯ ಇವಿ ವಾಹನಗಳ ಬಳಕೆಗೆ ಮಾತ್ರವೇ ಸೀಮಿತಗೊಳಿಸಲಾಗಿದೆ. ಇದರ ಕಾರ್ಯಕ್ಷಮತೆ, ನಿರ್ವಹಣೆ ಮತ್ತು ಬಳಕೆಯ ಅನುಭವವನ್ನು ಪರಿಶೀಲಿಸಿದ ಬಳಿಕ ಮುಂದಿನ ದಿನಗಳಲ್ಲಿ ಸಾರ್ವಜನಿಕ ಬಳಕೆಗೆ ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ನಿಗಮವು ಚಿಂತನೆ ನಡೆಸಿದೆ.

ಈ ಸಂದರ್ಭದಲ್ಲಿ ಸೆಸ್ಕ್‌ ತಾಂತ್ರಿಕ ನಿರ್ದೇಶಕರಾದ ಡಿ.ಜೆ.ದಿವಾಕರ್,‌ ಮುಖ್ಯ ಪ್ರಧಾನ ವ್ಯವಸ್ಥಾಪಕ(ತಾಂತ್ರಿಕ)ರಾದ ಶರಣಮ್ಮ ಎಸ್‌. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಪ್ರಧಾನ ವ್ಯವಸ್ಥಾಪಕರಾದ ಎನ್.ಆರ್.‌ ತಸ್ನೀಂ ತಬಸ್ಸುಂ, ಆರ್‌. ರಾಮಸ್ವಾಮಿ, ಎಚ್‌.ಆರ್. ದಿನೇಶ್‌ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಆಂದೋಲನ ಡೆಸ್ಕ್

Recent Posts

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

40 mins ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

53 mins ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

2 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

3 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

3 hours ago

ಅಧಿಕಾರ ಶಾಶ್ವತವಲ್ಲ : ‘ನನ್ನ ತಂದೆಯ ಇಚ್ಛೆಯಂತೆಯೇ ನಡೆಯುವೆ’ ; ಯತೀಂದ್ರ

ಚಿಕ್ಕೋಡಿ : ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಯಾವುದೇ…

3 hours ago