ಮೈಸೂರು ನಗರ

ಮೈಸೂರು | ಸೆಸ್ಕ್ ಕಚೇರಿಯಲ್ಲಿ ಮೇಲ್ದರ್ಜೆಗೇರಿಸಿದ ಇವಿ ಫಾಸ್ಟ್ ಚಾರ್ಜಿಂಗ್ ಘಟಕ ಉದ್ಘಾಟನೆ

ಮೈಸೂರು : ನವೀಕರಿಸಬಹುದಾದ ಇಂಧನ ಬಳಕೆಯನ್ನು ಉತ್ತೇಜಿಸುವ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಬೆಳೆಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಮಹತ್ವದ ಹೆಜ್ಜೆ ಇರಿಸಿದ್ದು, ನಿಗಮದ ಕಚೇರಿಯ ಆವರಣದಲ್ಲಿ ವಿದ್ಯುತ್ ವಾಹನಗಳಿಗಾಗಿ(ಇವಿ) ಮೇಲ್ದರ್ಜೆಗೇರಿಸಿದ ಅತ್ಯಾಧುನಿಕ 30 ಕೆವಿ ಫಾಸ್ಟ್ ಚಾರ್ಜಿಂಗ್ ಘಟಕವನ್ನು ಉದ್ಘಾಟಿಸಲಾಯಿತು.

ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ನಿಗಮ ಕಚೇರಿಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೆಸ್ಕ್‌ ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಹಾಗೂ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಈ ಚಾರ್ಜಿಂಗ್ ಘಟಕವನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ರಮೇಶ್‌ ಬಂಡಿಸಿದ್ದೇಗೌಡ, “ಇತ್ತೀಚೆಗೆ ಎಲೆಕ್ಟ್ರಿಕ್‌ ವಾಹನಗಳ ಬಳಕೆ ಪ್ರಮಾಣ ಹೆಚ್ಚಾಗುತ್ತಿದ್ದು, ನಿಗಮದ ವತಿಯಿಂದ ಇವಿ ವಾಹನಗಳ ಬಳಕೆಗೆ ಉತ್ತೇಜನ ನೀಡಲಾಗುತ್ತಿದೆ. ಇದರಿಂದ ವಾಯುಮಾಲಿನ್ಯ ತಡೆಯುವ ಜತೆಗೆ ಇಂಧನದ ಆಮದು ಅವಲಂಬನೆ ತಗ್ಗಿಸಿ, ಹಸಿರು ಶಕ್ತಿಯ ಬಳಕೆಯನ್ನು ಉತ್ತೇಜಿಸಲು ಪ್ರೋತ್ಸಾಹ ನೀಡಿದಂತಾಗುತ್ತದೆ,” ಎಂದರು.

ಇದನ್ನು ಓದಿ: ಗರ್ಭಿಣ ಹತ್ಯೆ | ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು

ನಿಗಮದ ಕಚೇರಿಯಲ್ಲಿ ಈ ಹಿಂದೆ ಇದ್ದ ಇವಿ ಚಾರ್ಜಿಂಗ್‌ ಘಟಕದ ಸಾಮರ್ಥ್ಯವನ್ನು ಪ್ರಸ್ತುತ 30 ಕೆವಿ ಫಾಸ್ಟ್‌ ಚಾರ್ಜಿಂಗ್‌ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲಾಗಿದ್ದು, ಒಂದೇ ಸಮಯದಲ್ಲಿ ಎರಡು ಕಾರುಗಳನ್ನು ಚಾರ್ಜ್ ಮಾಡಲು ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಫಾಸ್ಟ್ ಚಾರ್ಜಿಂಗ್ ತಂತ್ರಜ್ಞಾನ ಇರುವುದರಿಂದ ಒಂದು ಕಾರನ್ನು 40ರಿಂದ 45 ನಿಮಿಷದಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಲು ಸಾಧ್ಯವಾಗುತ್ತದೆ.

“ಝಿಯಾನ್‌ ಎಲೆಕ್ಟ್ರಿಕ್‌ ಸಂಸ್ಥೆ ಸಹಯೋಗದೊಂದಿಗೆ ನೂತನ ಇವಿ ಚಾರ್ಜಿಂಗ್ ಘಟಕ ಆರಂಭಿಸಿದ್ದು, ಝಿಯಾನ್ ಆ್ಯಪ್ ಮೂಲಕ ಚಾರ್ಜಿಂಗ್‌ ಹಬ್‌ ಬಳಸಬಹುದು. ಹೊಸದಾಗಿ ಆರಂಭಿಸಿರುವ ಇವಿ ಚಾರ್ಜಿಂಗ್‌ ಘಟಕವನ್ನು ಪ್ರಾಯೋಗಿಕವಾಗಿ ಸೆಸ್ಕ್ ಕಚೇರಿಯ ಇವಿ ವಾಹನಗಳ ಬಳಕೆಗೆ ಮಾತ್ರವೇ ಸೀಮಿತಗೊಳಿಸಲಾಗಿದೆ. ಇದರ ಕಾರ್ಯಕ್ಷಮತೆ, ನಿರ್ವಹಣೆ ಮತ್ತು ಬಳಕೆಯ ಅನುಭವವನ್ನು ಪರಿಶೀಲಿಸಿದ ಬಳಿಕ ಮುಂದಿನ ದಿನಗಳಲ್ಲಿ ಸಾರ್ವಜನಿಕ ಬಳಕೆಗೆ ವಿಸ್ತರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ನಿಗಮವು ಚಿಂತನೆ ನಡೆಸಿದೆ.

ಈ ಸಂದರ್ಭದಲ್ಲಿ ಸೆಸ್ಕ್‌ ತಾಂತ್ರಿಕ ನಿರ್ದೇಶಕರಾದ ಡಿ.ಜೆ.ದಿವಾಕರ್,‌ ಮುಖ್ಯ ಪ್ರಧಾನ ವ್ಯವಸ್ಥಾಪಕ(ತಾಂತ್ರಿಕ)ರಾದ ಶರಣಮ್ಮ ಎಸ್‌. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಪ್ರಧಾನ ವ್ಯವಸ್ಥಾಪಕರಾದ ಎನ್.ಆರ್.‌ ತಸ್ನೀಂ ತಬಸ್ಸುಂ, ಆರ್‌. ರಾಮಸ್ವಾಮಿ, ಎಚ್‌.ಆರ್. ದಿನೇಶ್‌ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.

ಆಂದೋಲನ ಡೆಸ್ಕ್

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

2 hours ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

2 hours ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

2 hours ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

2 hours ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

2 hours ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

2 hours ago