ಮೈಸೂರು : ನೀವು ಅಕ್ರಮವಾಗಿ ಹಣಕಾಸು ವ್ಯವಹಾರದಲ್ಲಿ ತೊಡಗಿದ್ದೀರಿ ಎಂದು ಪೊಲೀಸರ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಬೆದರಿಸಿದ ದುಷ್ಕರ್ಮಿಗಳು ಅವರ ಖಾತೆಯಿಂದ 10 ಲಕ್ಷ ರೂ. ಹಣವನ್ನು ವರ್ಗಾಯಿಸಿ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಹೆಬ್ಬಾಳು ನಿವಾಸಿ ಹಾಗೂ ಇಂಜಿನಿಯರ್ ಆಗಿರುವ ವ್ಯಕ್ತಿಗೆ ಅಪರಿಚಿತನೋರ್ವ ಕರೆ ಮಾಡಿದ್ದಾನೆ. ನಂತರ ನೀವು ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದೀರಿ ಎಂದು ಬೆರದಿಸಿದ್ದಾನೆ.
ನಿಮ್ಮ ಖಾತೆಗೆ ಕೋಟ್ಯಾಂತರ ರೂ. ಹಣ ಬಂದಿದೆ ಎಂದು ಬೆದರಿಸಿದ್ದಾನೆ. ನಂತರ ವ್ಯಕ್ತಿಯ ಬ್ಯಾಂಕ್ ಖಾತೆಯ ವಿವರವನ್ನು ಪಡೆದಿದ್ದಾನೆ. ಗೊಂದಲದಲ್ಲಿ ಇದ್ದ ಅವರು ಆತ ಹೇಳಿದ ವಿವರ ನೀಡಿದ್ದಾರೆ.
ಇದನ್ನೂ ಓದಿ:-ಗುಂಡ್ಲುಪೇಟೆ | ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆ ; ಕೊಲೆಯಲ್ಲಿ ಅಂತ್ಯ
ಕೆಲ ಹೊತ್ತಿನ ಬಳಿಕ ಅವರ ಖಾತೆಯಿಂದ 10 ಲಕ್ಷ ರೂ. ಹಣ ಬೇರೆಯವರ ಖಾತೆಗೆ ವರ್ಗಾವಣೆಯಾಗಿರುವುದು ಗೊತ್ತಾಗಿದೆ. ಆತಂಕಗೊಂಡ ಅವರು ಕೂಡಲೇ ಸೈಬರ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…
ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…
ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…
ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…